ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್, ಜೈಭಾರತ್ ಎಂದು ಹೇಳುತ್ತಾರೆ..
ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್, ಜೈಭಾರತ್ ಹೇಳುತ್ತಾರೆ
ಅಹ್ಮದಾಬಾದ್ : ಗುಜರಾತ್ ಶಾಲಾ ಮಕ್ಕಳು ಇಂದು ಜನವರಿ 1 ರಿಂದ ತರಗತಿ ಶಿಕ್ಷಕರು ಹಾಜರಿ ಕರೆಯುವಾಗ ‘ಪ್ರಸೆಂಟ್ ‘ ಎನ್ನುವಂತಿಲ್ಲ. ಅವರು ‘ಜೈಹಿಂದ್’ ಅಥವಾ ‘ಜೈ ಭಾರತ್’ ಎನ್ನಬೇಕಾಗುತ್ತದೆ.
ಗುಜರಾತಿನ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣದ ನಿರ್ದೇಶನಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆ ಪ್ರಕಾರ 1ರಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇಂದಿನಿಂದ ತರಗತಿಯಲ್ಲಿ ಹಾಜರಿ ಕರೆಯುವಾಗ ಜೈಹಿಂದ್ ಅಥವಾ ಜೈ ಭಾರತ್ ಎಂದು ಹೇಳುತ್ತಾರೆ.
ಗುಜರಾತಿನ ಅನುದಾನಿತ ಶಾಲೆಗಳು, ಸ್ವಂತ ಹಣಕಾಸಿನ ಶಾಲೆಗಳು ಕೂಡ ಸರಕಾರದ ಈ ಅಧಿಸೂಚನೆಯಂತೆ ನಡೆದುಕೊಳ್ಳಬೇಕಾಗಿದೆ.
ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಲ್ಲಿ ಈ ಹೊಸ ಪದ್ಧತಿಯನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವಂತೆ ಶಿಕ್ಷಕರಿಗೆ, ಶಿಕ್ಷಣಾಧಿಕಾರಿಗಳು ಆದೇಶಿಸಲಾಗಿದೆ.
ಸೋಮವಾರ ನಡೆದ ಸಭೆಯಲ್ಲಿ ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿನ್ ಚುದಾಸಮ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸಲೆಂದು ಈ ಕ್ರಮವನ್ನು ಪರಿಚಯಿಸಲಾಗಿದೆ.
ನೂತನ ಅಧಿಸೂಚನೆಯನ್ನು ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜ. 1ರಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
