ಈರೋಡ್: ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ.
ಈರೋಡ್ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.
ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ಆತನ ಪೋಷಕರಾದ ಮಾಣಿಕ್ ಮತ್ತು ಮಹಾಲಕ್ಷ್ಮಿ ನೆರೆಹೊರೆಯವರ ಸಹಾಯದಿಂದ ಆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಆತನ ಶ್ವಾಸನಾಳದಲ್ಲಿ ಬಾಳೆಹಣ್ಣಿನ ತುಂಡು ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ನಂತರ ವೈದ್ಯರು ಆ ಮಗುವನ್ನು ಚಿಕಿತ್ಸೆಗಾಗಿ ಈರೋಡ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಆದರೆ, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಉಸಿರಾಡಲಾಗದೆ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ನಂತರ ಬಾಳೆಹಣ್ಣಿನ ತುಂಡನ್ನು ಮಗುವಿನ ಶ್ವಾಸನಾಳದಿಂದ ತೆಗೆದುಹಾಕಲಾಯಿತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಾಣಿಕ್ಕಂ-ಮಹಾಲಕ್ಷ್ಮಿ ದಂಪತಿಗೆ 5 ವರ್ಷದ ಸಾಯಿಶರಣ್ ಎಂಬ ಮಗ ಮತ್ತು 2 ವರ್ಷದ ಮಗಳಿದ್ದಾರೆ. ದಂಪತಿಗಳಿಬ್ಬರೂ ಕೂಲಿ ಕೆಲಸಕ್ಕೆ ಹೋಗುವುದರಿಂದ ಅವರು ಸಾಮಾನ್ಯವಾಗಿ ಇಬ್ಬರೂ ಮಕ್ಕಳನ್ನು ಅಜ್ಜಿಯ ಮನೆಯಲ್ಲಿ ಬಿಡುತ್ತಿದ್ದರು. ಡಿ. 2ರ ರಾತ್ರಿ ಆ ಹುಡುಗನ ಅಜ್ಜಿ ಸಾಯಿಶರಣ್ಗೆ ತಿನ್ನಲು ಬಾಳೆಹಣ್ಣು ಕೊಟ್ಟಿದ್ದಾರೆ. ಹಣ್ಣು ತಿಂದ ಹುಡುಗ ಅದನ್ನು ನುಂಗಲು ಕಷ್ಟಪಡುತ್ತಿದ್ದನು. ಆ ಬಾಳೆಹಣ್ಣು ಹುಡುಗನ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಡಲು ತೊಂದರೆಯುಂಟಾಗಿ ಬಾಲಕ ಮೃತಪಟ್ಟಿದ್ದಾನೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…