ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ‘ಬಾಸ್ ಈಸ್ ಆಲ್ವೇಸ್ ರೈಟ್’. ನಾನು ಟಿಕೆಟ್ ಕೇಳಿಲ್ಲ ಎಂಬುದನ್ನು ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿಟಿ ರವಿ ಹೇಳಿದ್ದಾರೆ.
‘ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಪಕ್ಷನಿಷ್ಠೆ ಪ್ರಶ್ನಾರ್ಥಕ ಚಿಹ್ನೆಯಾಗಲು ಅವಕಾಶ ಕೊಟ್ಟಿಲ್ಲ. ಪಂಚಾಯತ್ನಿಂದ ಪಾರ್ಲಿಮೆಂಟ್ ವರೆಗೂ ಬಿಜೆಪಿ ಗೆಲ್ಲಿಸಬೇಕು ಅಂತ ಹೋರಾಟ ಮಾಡಿದ್ದೇನೆ. ಯಾರು ಯಾರು ಒಂದೊಂದು ಚುನಾವಣೆಯಲ್ಲಿ ಒಂದೊಂದು ತರಹ ವರ್ತನೆ ಮಾಡಿರುತ್ತಾರೋ ಅವರಿಗೆ ಇದು ಅನ್ವಯ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.
ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೆನೆ. ಚಿಕ್ಕಮಗಳೂರು ಸೇರಿದಂತೆ 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎಂದು ರವಿ ಭರವಸೆ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…