Featured

ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ  ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24

ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ  ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ವರ್ಷ ತನ್ನ ಮೊದಲ ಉಡಾವಣೆಯನ್ನು ಫೆ.28ರಂದು ನಡೆಸಲಿದೆ.

ಪಿಎಸ್‌ಎಲ್‌ವಿ -51 ರಾಕೆಟ್‌ 20 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದ್ದು, ಈ ಪೈಕಿ ಒಂದು ಖಾಸಗಿ ಉಪಗ್ರಹದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವ ಚಿತ್ರ, ಪವಿತ್ರ ಗ್ರಂಥ ಭಗವದ್ಗೀತೆಯ ಪ್ರತಿ ಹಾಗೂ 25 ಸಾವಿರ ನಾಗರಿಕರ ಹೆಸರನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ.

ಭಾರತದ ಖಾಸಗಿ ಸಂಸ್ಥೆಗಳು ಅಭಿವೃದ್ಧಿಪಡಿಸಿದ ‘ಆನಂದ್’, ‘ಸತೀಶ್ ಧವನ್’ ಹಾಗೂ ‘ಯೂನಿಟಿಶಾಟ್’ ಉಪಗ್ರಹಗಳ ಜೊತೆ ಬ್ರೆಜಿಲ್ ದೇಶಕ್ಕೆ ಸೇರಿದ ಅಮೆಜೋನಿಯಾ-1 ಉಪಗ್ರಹವನ್ನು ಇಸ್ರೋ ರಾಕೆಟ್‌ ಕಕ್ಷೆಗೆ ಸೇರಿಸಲಿದೆ.

ಖಾಸಗೀಕರಣವೆಂಬ ಷಡ್ಯಂತ್ರದ ಹಿಂದಿನ ಮೆದುಳೇ RSS : ದಿನೇಶ್‌ ಗುಂಡೂರಾವ್‌ -Vishwanews24

ಭಾರತೀಯ ಉಪಗ್ರಹಗಳಾದ ‘ಆನಂದ್’ ಅನ್ನು ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥೆ ‘ಪಿಕ್ಸೆಲ್’ ಅಭಿವೃದ್ದಿಪಡಿಸಿದೆ. ‘ಸತೀಶ್ ಧವನ್’ ಅನ್ನು ಚೆನ್ನೈ ಮೂಲದ ‘ಸ್ಪೇಸ್ ಕಿಡ್ಜ್‌ ಇಂಡಿಯಾ ಅನ್ನು ಜಿಟ್ ಶಾಟ್ (ಶ್ರೀಪೆರಂಬುದೂರ್), ಜಿಹೆಚ್ಆರ್ ಸಿ ಈ ಶಾಟ್ (ನಾಗ್ಪುರ), ಶ್ರೀ ಶಕ್ತಿ ಶಾಟ್ (ಕೊಯಮತ್ತೂರು) ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.

ಸ್ಪೇಸ್‌ಕಿಡ್ಜ್ ಇಂಡಿಯಾ ಭಾರತದ ಪ್ರಸಿದ್ಧ ಬಾಹ್ಯಕಾಶ ವಿಜ್ಞಾನಿ ಸತೀಶ್ ಧವನ್ ಅವರ ಹೆಸರಿನಲ್ಲಿ ʼಸತೀಶ್ ಧವನ್ʼ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದೆ. ತನ್ನ ಮೊದಲ ಉಪಗ್ರಹ ಇದಾಗಿರುವ ಕಾರಣ ಇದರಲ್ಲಿ ಪ್ರಧಾನಿ ಮೋದಿಯವರ ಭಾವ ಚಿತ್ರವನ್ನು ಉಪಗ್ರಹದಲ್ಲಿ ಕಳುಹಿಸುವುದಾಗಿ ಸಂಸ್ಥೆಯ ಸಿಇಓ ಡಾ.ಶ್ರೀಮತಿ ಕೇಸನ್ ಹೇಳಿದ್ದಾರೆ. ಉಪಗ್ರಹದ ಪ್ಯಾನೆಲ್‌ಗೆ ಮೋದಿಯವರ ಫೋಟೋ ಇರಲಿದೆ. ಜೊತೆಗೆ ‘ಆತ್ಮನಿರ್ಭರ್ ಮಿಷನ್’ ವಾಕ್ಯಗಳ ಜೊತೆಗೆ ಧರ್ಮಗ್ರಂಥ ಭಗವದ್ಗೀತೆಯ ಪ್ರತಿ, 25000 ಮಂದಿಯ ಹೆಸರುಗಳನ್ನು ಕೊಂಡೊಯ್ಯಲಿದೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರು : ಟ್ರಾಫಿಕ್ ಸಿಗ್ನಲ್‍ ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು : ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ -Vishwanews24

ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಹೆಸರುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಾವು ಮನವಿ ಮಾಡಿದ್ದೆವು. ಒಂದು ವಾರದಲ್ಲಿ 25 ಸಾವಿರ ಹೆಸರುಗಳು ನೋಂದಣಿಯಾದವು. ಈ ಪೈಕಿ 1 ಸಾವಿರ ವಿದೇಶಿಯರು ನೊಂದಣಿ ಮಾಡಿದ್ದಾರೆ. ಚೆನ್ನೈನ ಒಂದು ಶಾಲೆಯ ತನ್ನ ಎಲ್ಲ ವಿದ್ಯಾರ್ಥಿಗಳ ಹೆಸರನ್ನು ಕಳುಹಿಸಿದೆ. ಈ ಹೆಸರುಗಳೊಂದಿಗೆ ನಾವು ಮೋದಿಯವರ ಫೋಟೋವನ್ನು ಕಳುಹಿಸುತ್ತಿದ್ದೇವೆ. ಕೆಲ ವಿದೇಶಿ ಪ್ರಯೋಗಗಳಲ್ಲಿ ಆಯಾ ದೇಶಗಳು ಬೈಬಲ್‌ನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದವು. ಹಾಗಾಗಿ ನಮ್ಮ ದೇಶದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ನಭಕ್ಕೆ ಕಳುಹಿಸಲು ನಾವು ಮುಂದಾಗಿದ್ದೇವೆ ಎಂದು ಡಾ. ಶ್ರೀಮತಿ ಮಾಹಿತಿ ನೀಡಿದ್ದಾರೆ.

ಪ್ಯಾನೆಲ್‌ ಕೆಳಗಡೆ ಇಸ್ರೋ ಅಧ್ಯಕ್ಷ ಶಿವನ್‌ ಮತ್ತು ವೈಜ್ಞಾನಿಕ ಕಾರ್ಯದರ್ಶಿ ಡಾ.ಆರ್.ಉಮಾಮಹೇಶ್ವರನ್ ಅವರ ಹೆಸರು ಇರಲಿದೆ. ಉಪಗ್ರಹದಲ್ಲಿರುವ ಎಲೆಕ್ಟ್ರಾನಿಕ್ಸ್ ಮತ್ತು ಸರ್ಕ್ಯೂಟ್‌ ಸೇರಿದಂತೆ ಸೇರಿದಂತೆ ಎಲ್ಲವನ್ನೂ ಭಾರತದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

4 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago