Featured

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ : ಇಸ್ರೋ ಮಾಜಿ ಅಧ್ಯಕ್ಷ, ಡಾ.ಜಿ.ಮಾಧವನ್ ನಾಯರ್ -Vishwanews24

ಮಂಗಳೂರು: ನಮ್ಮ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ. ಚಂದ್ರಯಾನ-2 ಹೊಸ ಹುರುಪು ನೀಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಾಜಿ ಅಧ್ಯಕ್ಷ ಡಾ.ಜಿ.ಮಾಧವನ್ ನಾಯರ್ ಅಭಿಪ್ರಾಯಪಟ್ಟರು.

ಎ.ಜೆ ಸಮೂಹ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆ ಲಕ್ಷ್ಮೀ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ವತಿಯಿಂದ ಶುಕ್ರವಾರ ಆರಂಭಗೊಂಡ ಎರಡು ದಿನಗಳ ರಾಷ್ಟ್ರಮಟ್ಟದ ಫಿಸಿಯೋಥೆರಪಿ ಸಮ್ಮೇಳನ ‘ಕಾನ್‌ಫ್ಲುೃಯೆನ್ಸ್ -2019’ನಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಮಾನವ ಕುಲದ ಅಭಿವೃದ್ಧಿಗೆ ಬಾಹ್ಯಾಕಾಶ ಸಂಶೋಧನೆ ಸಹಕಾರಿ. ಸಾಮಾನ್ಯ ಜನರಿಗೂ ಇಂದು ಇದರ ಲಾಭ ತಲುಪಿದೆ. ಅಮೆರಿಕ, ರಷ್ಯಾಗಳಿಗೆ ಸರಿಸಮನಾಗಿ ಇಂದು ಭಾರತವೂ ಸಾಧನೆ ಮಾಡುತ್ತಿದೆ. ಮಾನವ ಸಹಿತ ಬಾಹ್ಯಾಕಾಶಯಾನಕ್ಕೆ ಸಿದ್ಧತೆ ನಡೆಸುತ್ತಿರುವುದು ಇದಕ್ಕೊಂದು ಉದಾಹರಣೆ. ಆದರೆ ಇದರಲ್ಲಿ ಸಾಕಷ್ಟು ಸವಾಲುಗಳಿದ್ದು, ಯಶಸ್ವಿಯಾಗುವ ವಿಶ್ವಾಸವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆ ರಾಜ್ಯ ಮಾತ್ರವಲ್ಲ ದೇಶದಲ್ಲೇ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಗ್ರಪಂಕ್ತಿಯಲ್ಲಿದೆ. ಇದಕ್ಕೆ ನಮ್ಮ ಹಿರಿಯರ ಪ್ರಯತ್ನ, ಶಿಕ್ಷಣ, ಆರೋಗ್ಯ ಸಂಸ್ಥೆಗಳ ಸ್ಥಾಪನೆ ಕಾರಣ ಎಂದರು.

ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಐಜಿಪಿ ಎಂ.ಚಂದ್ರಶೇಖರ್, ಕೊಚ್ಚಿನ್ ಲೇಕ್‌ಶೋರ್ ಆಸ್ಪತ್ರೆ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ವಿ.ಪಿ.ಗಂಗಾಧರನ್, ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಎ.ಪ್ರಶಾಂತ್ ಶೆಟ್ಟಿ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಎ.ಜೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ, ಕಾರ್ಯಕ್ರಮ ಸಂಘಟನಾ ಅಧ್ಯಕ್ಷ ಡಾ.ಅಭಿಲಾಶ್ ಪಿ.ವಿ, ಕಾರ್ಯದರ್ಶಿ ಡಾ.ಹರೀಶ್ ಎಸ್.ಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಸಂಜಯ್ ಏಪೆನ್ ಸ್ಯಾಮ್ಯುವೆಲ್ ವಂದಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago