ಬೆಂಗಳೂರು: ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸದಂತೆ ಸಿಐಡಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ‘ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂನ್ 17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸೂಚಿಸಿದೆ.
ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ‘ಬಿಎಸ್ ಯಡಿಯೂರಪ್ಪ ಅವರ ಮೇಲಿನ ಕರ್ನಾಟಕದ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣವು ಬಿಎಸ್ವೈ ಅವರನ್ನು ಹಿಂಬಾಲಿಸಿಕೊಂಡು ಬರುತ್ತಲೇ ಇದೆ. ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ’ ಎಂದಿದ್ದಾರೆ.
‘ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಚ್ಚ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ನೀಡಿ ‘ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ’ ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿಎಸ್ ಯಡಿಯೂರಪ್ಪ ಅವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ’ ಎಂದು ತಿಳಿಸಿದ್ದಾರೆ.ಈ ವರ್ಷದ ಮಾರ್ಚ್ 14 ರಂದು ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿತ್ತು. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ನ ನ್ಯಾಯಾಧೀಶರಾದ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…