ಉಡುಪಿ: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತ ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರದ ಬಗ್ಗೆ ನನಗೇನು ತಿಳಿದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಇನ್ನು ಮೈತ್ರಿ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂಬ ದೇವೇಗೌಡ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಸರಕಾರ ಬೀಳೋಕೆ ಯಾರು ಕಾರಣ ಅನ್ನೋದಿಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ದೇವೇಗೌಡ್ರು ಆರೋಪ ಮಾಡಿದಷ್ಟೂ ಸಲ ನಾನು ಉತ್ತರ ಕೊಡೋದಿಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.
ಇನ್ನು ಯುಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಯುಡಿಯೂರಪ್ಪ ಅವರೇ ಆಡಿಯೋ ತನ್ನದು ಎಂದು ಒಪ್ಪಿಕೊಂಡಿದ್ದಾರೆ. ಅವರು ದಿನಕ್ಕೊಂದು ಹೇಳಿಕೆ ಕೊಟ್ಟರೆ ನಂಬೋದು ಹೇಗೆ? ಈ ಪ್ರಕರಣ ಈಗಾಗಲೇ ಸುಪ್ರೀಂ ಮೆಟ್ಟಲೇರಿದೆ. ನಮ್ಮ ಲಾಯರ್ ಇವತ್ತು ವಾದವನ್ನೂ ಮಂಡಿಸಿದ್ದಾರೆ. ಅಮಿತ್ ಶಾ ಕುಮ್ಮಕ್ಕು ಬಹಿರಂಗವಾಗಿದೆ.ಗೃಹ ಸಚಿವರೇ ಹೀಗೆ ಮಾಡಿದ್ರೆ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯುತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಕಾಂಗ್ರೆಸ್ ನ ಶನಿ ಎಂಬ ಜನಾರ್ಧನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…