Featured

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್ -Vishwanews24

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್   ಕುಮಾರ್ ಕಟೀಲ್-Vishwanews24

ನಮ್ಮ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ”

ಬೆಂಗಳೂರು : ”ಬಿ ಎಸ್‌ ಯಡಿಯೂರಪ್ಪನವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ನಾನು ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಬಿಎಸ್‌ವೈ ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಆಗಸ್ಟ್ 24 ರ ಸೋಮವಾರದಂದು ಕನ್ನಡ ಪತ್ರಿಕೆಯೊಂದಕ್ಕೆ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಕ್ಷ ಮತ್ತು ಸರ್ಕಾರದ ನಡುವೆ ಯಾವುದೇ ಸಮನ್ವಯವಿಲ್ಲ ಹಾಗೂ ಪಕ್ಷಕ್ಕೆ ಸೇರ್ಪಡೆಯಾದ ಇತರೆ ಪಕ್ಷದಲ್ಲಿದ್ದ ನಾಯಕರು ಪಕ್ಷದ ಪ್ರಗತಿಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ”ಪಕ್ಷದಲ್ಲಿ ವಲಸಿಗರು ಹಾಗೂ ಇತರ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ತಾರತಮ್ಯ ಮಾಡಲಾಗುತ್ತಿಲ್ಲ. ಯಾವುದೇ ಕಾರ್ಯಕರ್ತರು ಮಲತಾಯಿ ಧೋರಣೆಗೆ ತುತ್ತಾಗಿಲ್ಲ” ಎಂದು ಹೇಳಿದ್ದಾರೆ.

”ನನ್ನ ಮತ್ತು ಯಡಿಯೂರಪ್ಪ ಅವರ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ” ಎಂದು ಭರವಸೆ ವ್ಯಕ್ತಪಡಿಸಿದ ಅವರು, ”ಕೊರೊನಾ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಕೋಟ್ಯಾಂತರ ಜನರಿಗೆ ಆಹಾರ ಮತ್ತು ಔಷಧಿಗಳನ್ನು ವಿವಿಧ ಸೇವಾ ಸಂಸ್ಥೆಗಳ ಮೂಲಕ ಪೂರೈಸಿದ್ದಾರೆ” ಎಂದಿದ್ದಾರೆ.

”ಕೊರೊನಾ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು, ರೈತ ಆತ್ಮಹತ್ಯೆಗಳನ್ನು ನಿಲ್ಲಿಸಿರುವುದು, ಹಗರಣಗಳನ್ನು ತಪ್ಪಿಸಿರುವುದು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿರುವುದು ರಾಜ್ಯ ಸರ್ಕಾರದ ಸಾಧನೆ” ಎಂದು ಸರ್ಕಾರವನ್ನು ಶ್ಲಾಘಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago