Featured

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್ -Vishwanews24

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್   ಕುಮಾರ್ ಕಟೀಲ್-Vishwanews24

ನಮ್ಮ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ”

ಬೆಂಗಳೂರು : ”ಬಿ ಎಸ್‌ ಯಡಿಯೂರಪ್ಪನವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ನಾನು ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಬಿಎಸ್‌ವೈ ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಆಗಸ್ಟ್ 24 ರ ಸೋಮವಾರದಂದು ಕನ್ನಡ ಪತ್ರಿಕೆಯೊಂದಕ್ಕೆ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಕ್ಷ ಮತ್ತು ಸರ್ಕಾರದ ನಡುವೆ ಯಾವುದೇ ಸಮನ್ವಯವಿಲ್ಲ ಹಾಗೂ ಪಕ್ಷಕ್ಕೆ ಸೇರ್ಪಡೆಯಾದ ಇತರೆ ಪಕ್ಷದಲ್ಲಿದ್ದ ನಾಯಕರು ಪಕ್ಷದ ಪ್ರಗತಿಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ”ಪಕ್ಷದಲ್ಲಿ ವಲಸಿಗರು ಹಾಗೂ ಇತರ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ತಾರತಮ್ಯ ಮಾಡಲಾಗುತ್ತಿಲ್ಲ. ಯಾವುದೇ ಕಾರ್ಯಕರ್ತರು ಮಲತಾಯಿ ಧೋರಣೆಗೆ ತುತ್ತಾಗಿಲ್ಲ” ಎಂದು ಹೇಳಿದ್ದಾರೆ.

”ನನ್ನ ಮತ್ತು ಯಡಿಯೂರಪ್ಪ ಅವರ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ” ಎಂದು ಭರವಸೆ ವ್ಯಕ್ತಪಡಿಸಿದ ಅವರು, ”ಕೊರೊನಾ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಕೋಟ್ಯಾಂತರ ಜನರಿಗೆ ಆಹಾರ ಮತ್ತು ಔಷಧಿಗಳನ್ನು ವಿವಿಧ ಸೇವಾ ಸಂಸ್ಥೆಗಳ ಮೂಲಕ ಪೂರೈಸಿದ್ದಾರೆ” ಎಂದಿದ್ದಾರೆ.

”ಕೊರೊನಾ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು, ರೈತ ಆತ್ಮಹತ್ಯೆಗಳನ್ನು ನಿಲ್ಲಿಸಿರುವುದು, ಹಗರಣಗಳನ್ನು ತಪ್ಪಿಸಿರುವುದು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿರುವುದು ರಾಜ್ಯ ಸರ್ಕಾರದ ಸಾಧನೆ” ಎಂದು ಸರ್ಕಾರವನ್ನು ಶ್ಲಾಘಿಸಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago