Featured

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್ -Vishwanews24

ಬಿಎಸ್‌ವೈ ಪೂರ್ಣಾವಧಿ ಸಿಎಂ ; ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ’ : ನಳಿನ್   ಕುಮಾರ್ ಕಟೀಲ್-Vishwanews24

ನಮ್ಮ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ”

ಬೆಂಗಳೂರು : ”ಬಿ ಎಸ್‌ ಯಡಿಯೂರಪ್ಪನವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ನಾನು ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಬಿಎಸ್‌ವೈ ಅವರೊಂದಿಗೆ ಜಂಟಿಯಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದೇನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಆಗಸ್ಟ್ 24 ರ ಸೋಮವಾರದಂದು ಕನ್ನಡ ಪತ್ರಿಕೆಯೊಂದಕ್ಕೆ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಕ್ಷ ಮತ್ತು ಸರ್ಕಾರದ ನಡುವೆ ಯಾವುದೇ ಸಮನ್ವಯವಿಲ್ಲ ಹಾಗೂ ಪಕ್ಷಕ್ಕೆ ಸೇರ್ಪಡೆಯಾದ ಇತರೆ ಪಕ್ಷದಲ್ಲಿದ್ದ ನಾಯಕರು ಪಕ್ಷದ ಪ್ರಗತಿಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ”ಪಕ್ಷದಲ್ಲಿ ವಲಸಿಗರು ಹಾಗೂ ಇತರ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ತಾರತಮ್ಯ ಮಾಡಲಾಗುತ್ತಿಲ್ಲ. ಯಾವುದೇ ಕಾರ್ಯಕರ್ತರು ಮಲತಾಯಿ ಧೋರಣೆಗೆ ತುತ್ತಾಗಿಲ್ಲ” ಎಂದು ಹೇಳಿದ್ದಾರೆ.

”ನನ್ನ ಮತ್ತು ಯಡಿಯೂರಪ್ಪ ಅವರ ಜಂಟಿ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲಲಿದೆ” ಎಂದು ಭರವಸೆ ವ್ಯಕ್ತಪಡಿಸಿದ ಅವರು, ”ಕೊರೊನಾ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಕೋಟ್ಯಾಂತರ ಜನರಿಗೆ ಆಹಾರ ಮತ್ತು ಔಷಧಿಗಳನ್ನು ವಿವಿಧ ಸೇವಾ ಸಂಸ್ಥೆಗಳ ಮೂಲಕ ಪೂರೈಸಿದ್ದಾರೆ” ಎಂದಿದ್ದಾರೆ.

”ಕೊರೊನಾ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು, ರೈತ ಆತ್ಮಹತ್ಯೆಗಳನ್ನು ನಿಲ್ಲಿಸಿರುವುದು, ಹಗರಣಗಳನ್ನು ತಪ್ಪಿಸಿರುವುದು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿರುವುದು ರಾಜ್ಯ ಸರ್ಕಾರದ ಸಾಧನೆ” ಎಂದು ಸರ್ಕಾರವನ್ನು ಶ್ಲಾಘಿಸಿದರು.

Vishwa News 24

Recent Posts

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 minutes ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

38 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

42 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago