ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಕೇಂದ್ರ ಅಥವಾ ರಾಜ್ಯದವರು ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಪ್ರಗತಿಪರ ಮಠಾಧೀಶರ ವೇದಿಕೆ ರಾಜ್ಯ ಕಾರ್ಯಧ್ಯಕ್ಷ ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಯಡಿಯೂರಪ್ಪ ಅವರು ಕೇವಲ ಲಿಂಗಾಯತ ನಾಯಕರಲ್ಲ, ಎಲ್ಲ ಜಾತಿ ಸಮುದಾಯದ ನಾಯಕರಾಗಿದ್ದಾರೆ. ಅವರು ಬಿಜೆಪಿಯನ್ನು ಬೇರು ಮಟ್ಟದಿಂದ ಬೆಳೆಸಿ ಸಿಎಂ ಆಗಿದ್ದಾರೆ. ಆದರೆ ಅವರನ್ನು ಅಧಿಕಾರದಿಂದ ಇಳಿಸಲು ಕೆಳಗಿಳಿಸಲು ಯೋಚಿಸಿದರೆ ಪ್ರಖರ ಹೋರಾಟ ನಡೆಸಬೇಕಾಗುತ್ತದೆ. ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಪಕ್ಷದಲ್ಲಿ ಯಡಿಯೂರಪ್ಪ ಪರ ವಿರೋಧ ಚಟುವಟಿಕೆ ನಡೆದಿವೆ.ಅವರು ಎಲ್ಲ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮನೋಭಾವ ಹೊಂದಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಬಾಕಿ ಉಳಿದ ಎರಡು ವರ್ಷ ಅವಧಿ ಪೂರ್ಣಗೊಳಿಸಲು ಬಿಡಬೇಕು. ಒಂದು ವೇಳೆ ಏನಾದರೂ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆದರೆ ಪರಿಸ್ಥಿತಿ ನೆಟ್ಟಗಿರಲ್ಲ. ಇಂತಹ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ತರಬಾರದು ಎಂದು ಸಾರಂಗಧರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…