Featured

ಬಿಎಸ್‍ವೈಗೆ  ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ : ದೇಶಿಕೇಂದ್ರ ಮಹಾಸ್ವಾಮೀಜಿ -Vishwanews24

ಬಿಎಸ್‍ವೈಗೆ  ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ : ದೇಶಿಕೇಂದ್ರ ಮಹಾಸ್ವಾಮೀಜಿ -Vishwanews24

ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ

 

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಕೇಂದ್ರ ಅಥವಾ ರಾಜ್ಯದವರು ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಪ್ರಗತಿಪರ ಮಠಾಧೀಶರ ವೇದಿಕೆ ರಾಜ್ಯ ಕಾರ್ಯಧ್ಯಕ್ಷ ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಯಡಿಯೂರಪ್ಪ ಅವರು ಕೇವಲ ಲಿಂಗಾಯತ ನಾಯಕರಲ್ಲ, ಎಲ್ಲ ಜಾತಿ ಸಮುದಾಯದ ನಾಯಕರಾಗಿದ್ದಾರೆ. ಅವರು ಬಿಜೆಪಿಯನ್ನು ಬೇರು ಮಟ್ಟದಿಂದ ಬೆಳೆಸಿ ಸಿಎಂ ಆಗಿದ್ದಾರೆ. ಆದರೆ ಅವರನ್ನು ಅಧಿಕಾರದಿಂದ ಇಳಿಸಲು ಕೆಳಗಿಳಿಸಲು ಯೋಚಿಸಿದರೆ ಪ್ರಖರ ಹೋರಾಟ ನಡೆಸಬೇಕಾಗುತ್ತದೆ. ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಪಕ್ಷದಲ್ಲಿ ಯಡಿಯೂರಪ್ಪ ಪರ ವಿರೋಧ ಚಟುವಟಿಕೆ ನಡೆದಿವೆ.ಅವರು ಎಲ್ಲ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮನೋಭಾವ ಹೊಂದಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಬಾಕಿ ಉಳಿದ ಎರಡು ವರ್ಷ ಅವಧಿ ಪೂರ್ಣಗೊಳಿಸಲು ಬಿಡಬೇಕು. ಒಂದು ವೇಳೆ ಏನಾದರೂ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆದರೆ ಪರಿಸ್ಥಿತಿ ನೆಟ್ಟಗಿರಲ್ಲ. ಇಂತಹ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ತರಬಾರದು ಎಂದು ಸಾರಂಗಧರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

12 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

14 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

14 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

14 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago