ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತರು ದಾಖಲೆಯೊಂದನ್ನು ಬಿಡುಗಡೆ ಮಾಡುವ ಮೂಲಕ ಹೊಸ ತಿರುವು ನೀಡಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಯುಡಿಯೂರಪ್ಪನವರದ್ದು ಹೌದೋ? ಅಲ್ಲವೋ? ಎಂಬ ಗೊಂದಲವಿತ್ತು. ಆದರೆ ಇದೀಗ ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್ ವೈ ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.
2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್ ಗೆ ಬಿಎಸ್ ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್ ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್ ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…