Featured

ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ , ಪಕ್ಷ ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ : ಕೆ.ಎಸ್. ಈಶ್ವರಪ್ಪ – vishwanews24

ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ , ಪಕ್ಷ ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ : ಕೆ.ಎಸ್. ಈಶ್ವರಪ್ಪ

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ ವಿರುದ್ಧ ಗುಡುಗಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಈಗ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಸಿಕ್ಕಿದೆ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಮುಕ್ತ ಮಾಡಬೇಕು ಎಂಬ ಆಪೇಕ್ಷೆ ಕಾರ್ಯಕರ್ತರು ಮತ್ತು ನಾಯಕರಲ್ಲಿದೆ ಎಂದರು.

ನರೇಂದ್ರ ಮೋದಿ ಅವರು ಕಾಂಗ್ರೆಸ್ ಕುಟುಂಬ ರಾಜ ಕಾರಣ ಮುಕ್ತ ಮಾಡಬೇಕು ಎನ್ನುತ್ತಾರೆ. ಆದರೆ, ರಾಜ್ಯ ಬಿಜೆಪಿ ಬಿಎಸ್ ವೈ, ರಾಘವೇಂದ್ರ, ವಿಜಯೇಂದ್ರ ಕೈಯಲ್ಲಿದೆ. ಪಕ್ಷವನ್ನು ಅಪ್ಪ ಮಕ್ಕಳಿಂದ ಮುಕ್ತ ಮಾಡಬೇಕು ಎಂದು ಹೇಳಿದರು.

ಬಿಎಸ್ ವೈ ಏನೇ ಹೇಳಿದರೂ ಸರಿ ಇದೆ ಎಂಬ ಭ್ರಮೆಯಲ್ಲಿ ಕೇಂದ್ರದ ನಾಯಕರು ಇದ್ದಾರೆ. ಇದನ್ನು ಕೇಂದ್ರದ ನಾಯಕರಿಗೆ ತಿಳಿಸಬೇಕಿದೆ. ಹಾಗಾಗಿ ನಾನು ತಿರುಗಿ ಬಿದ್ದು ಚುನಾವಣೆಗೆ ನಿಂತೆ ಎಂದರು.

ಪಕ್ಷವನ್ನು ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ. ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ ಪಕ್ಷ ಶುದ್ದೀಕರಣ ಮಾಡಬೇಕೆನ್ನುವುದು ಪ್ರಾಮಾಣಿಕ ರಾಜಕಾರಣ. ನಾನು ಹೋರಾಟ ಶುರು ಮಾಡಿದ್ದೇನೆ. ಮುಂದೆ ನಮ್ಮೊಂದಿಗೆ ಇನಷ್ಟು ಜನರು ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಉಚ್ಚಾಟನೆಗೆ ಬೆಲೆ ಇಲ್ಲ. ಮುಖಂಡರು ಕಾರ್ಯಕರ್ತರು ಹೇದರದೆ ಪಕ್ಷ ಶುದ್ದೀಕರಣಕ್ಕೆ ಕೈ ಜೋಡಿಸಿ ಎಂದು ಕರೆ ನೀಡಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago