ಬಿಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ – Vishwanews24

Featured, ರಾಜ್ಯ ನ್ಯೂಸ್

ಬಿಎಸ್ ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.

ಬಿ.ಎಸ್.ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಇದೀಗ ವಿಚಾರಣಾ ಕೋರ್ಟ್ ವಜಾ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಶಿಧರ ಮರಡಿ,ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್. ಟಿ. ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ. ರವಿ,ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು.

ಇನ್ನು ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಬಿ.ಎಸ್.ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್ ಕಾಲಾವಕಾಶ ಕೋರಿದ್ದಾರೆ.

ಉಡುಪಿ: ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ – Vishwanews24

Leave a Reply