ಬೆಳಗಾವಿ: ಬಿ.ಎಸ್.ಯಡಿಯೂರಪ್ಪ ಶೀಘ್ರದಲ್ಲೇ ಸರ್ಕಾರ ರಚಿಸಲಿದ್ದಾರೆ. ಮೈತ್ರಿ ಸರ್ಕಾರದಿಂದ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ದೂರವಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಬಿಜೆಪಿಗೆ ಬರಬೇಕು ಎಂಬ ಆಸೆ ಇದೆ. ಅವರು ನಮಗೆ ಬೆಂಬಲ ಕೊಡುವ ಭರವಸೆಯಿದೆ. 10 ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ, ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಭಾವನೆ ಎಂದಿದ್ದಾರೆ.
ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಸರ್ಕಾರ ರಚನೆಯಾದ ಮೇಲೆ ಜಾರಕಿಹೊಳಿ ಸಹೋದರರು ಮಾನಸಿಕವಾಗಿ ನೊಂದಿದ್ದಾರೆ.ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಬಿಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನಕ್ಕೆ ದಿನ ಆರಂಭವಾಗಿದೆ. ನಾವು ಯಾವುದೇ ಆಪರೇಷನ್ ನಡೆಸುವುದಿಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದ ಬಗ್ಗೆ ಅನೇಕರಿಗೆ ಗೊಂದಲವಿದೆ. ಹೆಚ್ಚು ದಿನ ಸರ್ಕಾರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಹೇಳಿದರು. 10ಕ್ಕೂ ಹೆಚ್ಚು ಶಾಸಕರು ಬಂದರೆ ಸರ್ಕಾರ ರಚನೆ ಮಾಡುವುದು ಶತಸಿದ್ಧ. ನಮ್ಮದು ಅತಿದೊಡ್ಡ ಪಕ್ಷವಾಗಿದ್ದು, ಅಸಮಾಧಾನಗೊಂಡಿರುವ ಶಾಸಕರು ಬಿಜೆಪಿಗೆ ಬಂದರೆ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ. ಅದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ, ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆ :
ಕೋಟಾ ಶ್ರೀನಿವಾಸ ಪೂಜಾರಿ ಭವಿಷ್ಯ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…