ಬೆಳಗಾವಿ: ಬಿ.ಎಸ್.ಯಡಿಯೂರಪ್ಪ ಶೀಘ್ರದಲ್ಲೇ ಸರ್ಕಾರ ರಚಿಸಲಿದ್ದಾರೆ. ಮೈತ್ರಿ ಸರ್ಕಾರದಿಂದ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ದೂರವಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಬಿಜೆಪಿಗೆ ಬರಬೇಕು ಎಂಬ ಆಸೆ ಇದೆ. ಅವರು ನಮಗೆ ಬೆಂಬಲ ಕೊಡುವ ಭರವಸೆಯಿದೆ. 10 ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ, ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಭಾವನೆ ಎಂದಿದ್ದಾರೆ.
ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ವದಂತಿಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಸರ್ಕಾರ ರಚನೆಯಾದ ಮೇಲೆ ಜಾರಕಿಹೊಳಿ ಸಹೋದರರು ಮಾನಸಿಕವಾಗಿ ನೊಂದಿದ್ದಾರೆ.ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಬಿಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಪತನಕ್ಕೆ ದಿನ ಆರಂಭವಾಗಿದೆ. ನಾವು ಯಾವುದೇ ಆಪರೇಷನ್ ನಡೆಸುವುದಿಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದ ಬಗ್ಗೆ ಅನೇಕರಿಗೆ ಗೊಂದಲವಿದೆ. ಹೆಚ್ಚು ದಿನ ಸರ್ಕಾರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಹೇಳಿದರು. 10ಕ್ಕೂ ಹೆಚ್ಚು ಶಾಸಕರು ಬಂದರೆ ಸರ್ಕಾರ ರಚನೆ ಮಾಡುವುದು ಶತಸಿದ್ಧ. ನಮ್ಮದು ಅತಿದೊಡ್ಡ ಪಕ್ಷವಾಗಿದ್ದು, ಅಸಮಾಧಾನಗೊಂಡಿರುವ ಶಾಸಕರು ಬಿಜೆಪಿಗೆ ಬಂದರೆ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ. ಅದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ, ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆ :
ಕೋಟಾ ಶ್ರೀನಿವಾಸ ಪೂಜಾರಿ ಭವಿಷ್ಯ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…