Featured

ಬಿಗ್‌ಬಾಸ್ ಬಂದ್ ವಿಚಾರದಲ್ಲಿ ಡಿಕೆಶಿ ಯಾವುದೇ ಹಸ್ತಕ್ಷೇಪವಿಲ್ಲ :  ಈಶ್ವರ್ ಖಂಡ್ರೆ – vishwanews24

ಬಿಗ್‌ಬಾಸ್ ಬಂದ್ ವಿಚಾರದಲ್ಲಿ ಡಿಕೆಶಿ ಯಾವುದೇ ಹಸ್ತಕ್ಷೇಪವಿಲ್ಲ :  ಈಶ್ವರ್ ಖಂಡ್ರೆ

ಬೆಂಗಳೂರು : ನಟ್ಟು ಬೋಲ್ಟು ವಿಚಾರಕ್ಕೂ ಬಿಗ್‌ಬಾಸ್ ಬಂದ್‌ಗೂ ಯಾವುದೇ ಸಂಬoಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಲಿನ್ಯ ನಿಯಂತ್ರಣ ಮಂಡಳಿ ಕೊಟ್ಟ ನೋಟಿಸ್‌ಗೂ ಬಿಗ್‌ಬಾಸ್ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧ ಇಲ್ಲ. ಜಾಲಿವುಡ್ ಮಾಲೀಕರು ಸಿಎಫ್‌ಪಿಸಿಎಫ್‌ಓ ತೆಗೆದುಕೊಂಡಿಲ್ಲ ಅದಕ್ಕೆ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಬೇರೆ ಏನೂ ಇಲ್ಲ. ಈಗ ಅವರು ಹೈಕೋರ್ಟ್‌ಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ನಟ್ಟು ಬೋಲ್ಟು ವಿಚಾರವಾಗಿ ಇದಕ್ಕೂ ಅದಕ್ಕೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ” ಎಂದು ತಿಳಿಸಿದರು.

“ಹಲವು ಬಾರಿ ನೋಟಿಸ್ ಕೊಟ್ಟರೂ ಅವರು ಕ್ಯಾರೆ ಎನ್ನಲಿಲ್ಲ. ಹೀಗಾಗಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ. ಟಿವಿ ನೋಡಿ ನನಗೆ ವಿಚಾರ ಗೊತ್ತಾಯ್ತು. ಮಾಲಿನ್ಯ ಇಲಾಖೆಯವರು ಬಂದ್ ಮಾಡಿದ್ದಾರೆ. ಮನರಂಜನೆ ಇರಬೇಕು, ಏನೋ ಸಣ್ಣಪುಟ್ಟ ತಪ್ಪುಗಳು ಆಗಿರುತ್ತವೆ ಎಂದು ನಾನೇ ಡಿಸಿ, ಎಸ್‌ಪಿಗೆ ಕಾಲ್‌ಮಾಡಿ ಹೇಳಿದ್ದೇನೆ. ಪೊಲ್ಯುಷನ್ ಬೋರ್ಡ್ ಜೊತೆಗೂ ಮಾತಾಡಿದ್ದೇನೆ. ಬಿಗ್‌ಬಾಸ್‌ಗೆ ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಹೇಳಿದ್ದೇನೆ. ಸದ್ಯ ಅವರು ಹೈಕೋರ್ಟ್‌ಗೆ ಹೋಗಿದ್ದಾರೆ. ಅಲ್ಲಿ ತೀರ್ಪು ಬಂದ ಮೇಲೆ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

12 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

12 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago