ಬೆಂಗಳೂರು : ನಟ್ಟು ಬೋಲ್ಟು ವಿಚಾರಕ್ಕೂ ಬಿಗ್ಬಾಸ್ ಬಂದ್ಗೂ ಯಾವುದೇ ಸಂಬoಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಲಿನ್ಯ ನಿಯಂತ್ರಣ ಮಂಡಳಿ ಕೊಟ್ಟ ನೋಟಿಸ್ಗೂ ಬಿಗ್ಬಾಸ್ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧ ಇಲ್ಲ. ಜಾಲಿವುಡ್ ಮಾಲೀಕರು ಸಿಎಫ್ಪಿಸಿಎಫ್ಓ ತೆಗೆದುಕೊಂಡಿಲ್ಲ ಅದಕ್ಕೆ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಬೇರೆ ಏನೂ ಇಲ್ಲ. ಈಗ ಅವರು ಹೈಕೋರ್ಟ್ಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ನಟ್ಟು ಬೋಲ್ಟು ವಿಚಾರವಾಗಿ ಇದಕ್ಕೂ ಅದಕ್ಕೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಉಪಮುಖ್ಯಮಂತ್ರಿಗಳ ಯಾವುದೇ ಹಸ್ತಕ್ಷೇಪವಿಲ್ಲ” ಎಂದು ತಿಳಿಸಿದರು.
“ಹಲವು ಬಾರಿ ನೋಟಿಸ್ ಕೊಟ್ಟರೂ ಅವರು ಕ್ಯಾರೆ ಎನ್ನಲಿಲ್ಲ. ಹೀಗಾಗಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ. ಟಿವಿ ನೋಡಿ ನನಗೆ ವಿಚಾರ ಗೊತ್ತಾಯ್ತು. ಮಾಲಿನ್ಯ ಇಲಾಖೆಯವರು ಬಂದ್ ಮಾಡಿದ್ದಾರೆ. ಮನರಂಜನೆ ಇರಬೇಕು, ಏನೋ ಸಣ್ಣಪುಟ್ಟ ತಪ್ಪುಗಳು ಆಗಿರುತ್ತವೆ ಎಂದು ನಾನೇ ಡಿಸಿ, ಎಸ್ಪಿಗೆ ಕಾಲ್ಮಾಡಿ ಹೇಳಿದ್ದೇನೆ. ಪೊಲ್ಯುಷನ್ ಬೋರ್ಡ್ ಜೊತೆಗೂ ಮಾತಾಡಿದ್ದೇನೆ. ಬಿಗ್ಬಾಸ್ಗೆ ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಹೇಳಿದ್ದೇನೆ. ಸದ್ಯ ಅವರು ಹೈಕೋರ್ಟ್ಗೆ ಹೋಗಿದ್ದಾರೆ. ಅಲ್ಲಿ ತೀರ್ಪು ಬಂದ ಮೇಲೆ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…