Featured

ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ – Vishwanews24

ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10 ಭಾನುವಾರ (ಅ.08) ದಿಂದ ಆರಂಭವಾಗಿದ್ದು, ಇದೀಗ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಗ್‌ಬಾಸ್‌ ಮನೆಗೆ ಎಂಟ್ರಿ ಆಗಿರುವುದನ್ನು ತೋರಿಸಲಾಗಿದೆ. ಇದು ಬಿಗ್‌ಬಾಸ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಭಾನುವಾರದಿಂದ ಆರಂಭವಾದ ಶೋನಲ್ಲಿ ಈಗಾಗಲೇ ಹಲವಾರು ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ಇಂದು ಶಾಸಕ ಪ್ರದೀಪ್ ಈಶ್ವರ್ ಬಿಗ್‌ಬಾಸ್ ದೊಡ್ಮನೆ ಸೇರಿರುವುದು ಕೊಂಚ ಕುತೂಹಲ ಹುಟ್ಟುಹಾಕಿದೆ.

ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಶೋನಲ್ಲಿ ಪ್ರದೀಪ್ ಈಶ್ವರ್ ಬಿಗ್‌ಬಾಸ್‌ ಮನೆಗೆ ಹೋಗುತ್ತಿರುವುದನ್ನು ತೋರಿಸಲಾಗುತ್ತದೆ. ಅಂದಹಾಗೆ ಪ್ರದೀಪ್ ಶಾಸಕರಾಗಿರುವುದರಿಂದ ಕೆಲವೇ ದಿನಗಳವರೆಗೆ ಅತಿಥಿಯಾಗಿ ಅವರು ದೊಡ್ಮನೆಯಲ್ಲಿ ಇರಬಹುದು ಎನ್ನಲಾಗುತ್ತಿದೆ.

ಪ್ರೋಮೋದಲ್ಲಿ ತೋರಿಸಿರುವ ಮಾಹಿತಿಯ ಪ್ರಕಾರ, ‘ನಾನು ಬಿಗ್ ಬಾಸ್ ಮನೆಗೆ ನಿನ್ನೆಯೇ ಬರಬೇಕಿತ್ತು. ಸ್ಪರ್ಧಿಯಾಗಿ ನಾನು ಬಿಗ್ ಬಾಸ್ ಮನೆಗೆ ಬಂದಿರೋದಿಕ್ಕೆ ಖುಷಿಯಾಗಿದೆ. ನಾವೆಲ್ಲ ಬೆಂಗಳೂರಿಗೆ ಸೋಲೋಕೆ ಬಂದವರು, ಪ್ರತಿಸ್ಪರ್ಧಿಗಳು ಗೆಲ್ಲೋಕೆ’ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಪ್ರದೀಪ್ ಈಶ್ವರ್ ಎಂಟ್ರಿಗೆ ಸಂತು ‘ನಾವು ಎಂಎಲ್‌ಎ ಜೊತೆ ಸ್ಪರ್ಧೆ ಮಾಡ್ತಿದ್ದೇವೆ, ಇದು ತಮಾಷೆ ವಿಷಯವೇ ಅಲ್ಲ’ ಎಂದು ಹೇಳಿದ್ದಾರೆ. ‘ನಾನು ಎಂಟ್ರಿ ಅಂತಲೇ ಅಂತ ಅಂದುಕೊಂಡಿರಲಿಲ್ಲ’ ಅಂತ ಸಿರಿ ಅವರು ಹೇಳುತ್ತಿರುವುದನ್ನು ಕಾಣಬಹುದು.

ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಸ್ಪರ್ಧಿಯಾಗಿ ಇರಲಿದ್ದಾರೆ ಎಂದು ಪೋಸ್ಟ್ ವೈರಲ್ ಆಗಿತ್ತು. ಸದ್ಯ ಪ್ರದೀಪ್ ಅವರ ಎಂಟ್ರಿಗೆ ಬಿಗ್ ಬಾಸ್​​ ಮನೆಮಂದಿ ಮಾತ್ರವಲ್ಲದೆ, ಪ್ರೇಕ್ಷಕರು ಸರ್​​ಪ್ರೈಸ್​​​ ಆಗಿದ್ದಾರೆ. ಜತೆಗೆ ವೀಕ್ಷರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago