ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಭಾನುವಾರ (ಅ.08) ದಿಂದ ಆರಂಭವಾಗಿದ್ದು, ಇದೀಗ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಗ್ಬಾಸ್ ಮನೆಗೆ ಎಂಟ್ರಿ ಆಗಿರುವುದನ್ನು ತೋರಿಸಲಾಗಿದೆ. ಇದು ಬಿಗ್ಬಾಸ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಭಾನುವಾರದಿಂದ ಆರಂಭವಾದ ಶೋನಲ್ಲಿ ಈಗಾಗಲೇ ಹಲವಾರು ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ಇಂದು ಶಾಸಕ ಪ್ರದೀಪ್ ಈಶ್ವರ್ ಬಿಗ್ಬಾಸ್ ದೊಡ್ಮನೆ ಸೇರಿರುವುದು ಕೊಂಚ ಕುತೂಹಲ ಹುಟ್ಟುಹಾಕಿದೆ.
ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಶೋನಲ್ಲಿ ಪ್ರದೀಪ್ ಈಶ್ವರ್ ಬಿಗ್ಬಾಸ್ ಮನೆಗೆ ಹೋಗುತ್ತಿರುವುದನ್ನು ತೋರಿಸಲಾಗುತ್ತದೆ. ಅಂದಹಾಗೆ ಪ್ರದೀಪ್ ಶಾಸಕರಾಗಿರುವುದರಿಂದ ಕೆಲವೇ ದಿನಗಳವರೆಗೆ ಅತಿಥಿಯಾಗಿ ಅವರು ದೊಡ್ಮನೆಯಲ್ಲಿ ಇರಬಹುದು ಎನ್ನಲಾಗುತ್ತಿದೆ.
ಪ್ರೋಮೋದಲ್ಲಿ ತೋರಿಸಿರುವ ಮಾಹಿತಿಯ ಪ್ರಕಾರ, ‘ನಾನು ಬಿಗ್ ಬಾಸ್ ಮನೆಗೆ ನಿನ್ನೆಯೇ ಬರಬೇಕಿತ್ತು. ಸ್ಪರ್ಧಿಯಾಗಿ ನಾನು ಬಿಗ್ ಬಾಸ್ ಮನೆಗೆ ಬಂದಿರೋದಿಕ್ಕೆ ಖುಷಿಯಾಗಿದೆ. ನಾವೆಲ್ಲ ಬೆಂಗಳೂರಿಗೆ ಸೋಲೋಕೆ ಬಂದವರು, ಪ್ರತಿಸ್ಪರ್ಧಿಗಳು ಗೆಲ್ಲೋಕೆ’ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಪ್ರದೀಪ್ ಈಶ್ವರ್ ಎಂಟ್ರಿಗೆ ಸಂತು ‘ನಾವು ಎಂಎಲ್ಎ ಜೊತೆ ಸ್ಪರ್ಧೆ ಮಾಡ್ತಿದ್ದೇವೆ, ಇದು ತಮಾಷೆ ವಿಷಯವೇ ಅಲ್ಲ’ ಎಂದು ಹೇಳಿದ್ದಾರೆ. ‘ನಾನು ಎಂಟ್ರಿ ಅಂತಲೇ ಅಂತ ಅಂದುಕೊಂಡಿರಲಿಲ್ಲ’ ಅಂತ ಸಿರಿ ಅವರು ಹೇಳುತ್ತಿರುವುದನ್ನು ಕಾಣಬಹುದು.
ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಸ್ಪರ್ಧಿಯಾಗಿ ಇರಲಿದ್ದಾರೆ ಎಂದು ಪೋಸ್ಟ್ ವೈರಲ್ ಆಗಿತ್ತು. ಸದ್ಯ ಪ್ರದೀಪ್ ಅವರ ಎಂಟ್ರಿಗೆ ಬಿಗ್ ಬಾಸ್ ಮನೆಮಂದಿ ಮಾತ್ರವಲ್ಲದೆ, ಪ್ರೇಕ್ಷಕರು ಸರ್ಪ್ರೈಸ್ ಆಗಿದ್ದಾರೆ. ಜತೆಗೆ ವೀಕ್ಷರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…