Featured

ಬಿಗ್‌ಬಾಸ್‌ ಸೀಸನ್‌ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ : ಮಂಗಳೂರಿನಲ್ಲಿ ರೂಪೇಶ್ ಶೆಟ್ಟಿ – Vishwanews24

ಮಂಗಳೂರಲ್ಲಿ ರೂಪೇಶ್ ಶೆಟ್ಟಿಗೆ ಅದ್ದೂರಿ ಸ್ವಾಗತ..

ನೆಹರೂ ಮೈದಾನದಿಂದ ಕುತ್ತಾರಿನ ಕೊರಗಜ್ಜನ ಕ್ಷೇತ್ರದವರೆಗೆ ವಿಜಯ ಯಾತ್ರೆ

ಬಿಗ್‌ಬಾಸ್‌ ಸೀಸನ್‌ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ

ಶೇ. 50ರಷ್ಟು ಹಣ ಸಮಾಜ ಸೇವೆಗೆ

ಮಂಗಳೂರು: “ನಾನು ಕೊರಗಜ್ಜನ ಭಕ್ತ. ಬಿಗ್‌ಬಾಸ್‌ ಮನೆಯಲ್ಲಿ ಟಾಸ್ಕ್ಗಳು ಸೇರಿದಂತೆ ಇಡೀ ಸೀಸನ್‌ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ. ಮಂಗಳೂರಿಗೆ ಆಗಮಿಸಿದಾಗ ಮೊದಲು ಕೊರಗಜ್ಜನ ಸನ್ನಿಧಿಗೆ ಹೋಗಬೇಕು ಅಂದುಕೊಂಡಿದ್ದೆ. ಅದರಂತೆ ತೆರಳುತ್ತಿದ್ದೇನೆ’ ಎಂದು ಬಿಗ್‌ಬಾಸ್‌ ಕನ್ನಡ 9ನೇ ಆವೃತ್ತಿ ಮತ್ತು ಒಟಿಟಿ ಬಿಗ್‌ಬಾಸ್‌ ವಿಜೇತ ರೂಪೇಶ್‌ ಶೆಟ್ಟಿ ಹೇಳಿದರು.

ರೂಪೇಶ್‌ ಗೆಲುವಿನ ಬಳಿಕ ಮೊದಲ ಬಾರಿ ರವಿವಾರ ಮಂಗಳೂರಿಗೆ ಆಗಮಿಸಿದ್ದು, ನೆಹರೂ ಮೈದಾನದಿಂದ ಕುತ್ತಾರಿನ ಕೊರಗಜ್ಜನ ಕ್ಷೇತ್ರದವರೆಗೆ ವಿಜಯ ಯಾತ್ರೆ ನಡೆಯಿತು.

ಮಾಧ್ಯಮದವರ ಜತೆ ಮಾತನಾಡಿದ ಅವರು, ನಾನೊಬ್ಬ ತುಳುವ. ನನ್ನ ಬಿಗ್‌ಬಾಸ್‌ ಯಾನಕ್ಕೆ ತುಳುನಾಡಿಗರು ಸೇರಿದಂತೆ ರಾಜ್ಯದ ಜನತೆ ಪ್ರೀತಿ ತೋರಿಸಿದ್ದಾರೆ ಎಂದರು. ಬಿಗ್‌ಬಾಸ್‌ ಮನೆಯಲ್ಲಿ ತುಳುನಾಡಿನ ಸಂಸ್ಕೃತಿ ಹುಲಿವೇಷವನ್ನು ಪ್ರದರ್ಶಿಸಲು ಅವಕಾಶ ನೀಡಿದ್ದು ತುಂಬಾ ಖುಷಿ ಯಾಯಿತು. ಬಿಗ್‌ಬಾಸ್‌ ಮತ್ತು ಒಟಿಟಿ ಸೀಸನ್‌ ಇತಿಹಾಸದಲ್ಲಿ ಅತ್ಯಂತ ಹೆಚ್ಚಿನ ಮತ ಪಡೆದವ ನಾನು ಎಂದು ತಿಳಿದು ಖುಷಿಯಾಗಿದೆ. ಇದು ಪ್ರತಿ ಅಭಿಮಾನಿಯ ಗೆಲುವು ಎಂದರು.

ಕನ್ನಡದಲ್ಲೂ ಅವಕಾಶ
ಕೆಲವೇ ದಿನಗಳಲ್ಲಿ ನನ್ನ ನಿರ್ದೇಶನದ “ಸರ್ಕಸ್‌’ ಎಂಬ ತುಳು ಚಲನಚಿತ್ರ ಬಿಡುಗಡೆಯಾಗಲಿದೆ. ಬಿಗ್‌ಬಾಸ್‌ ಗೆದ್ದ ಬಳಿಕ ಕನ್ನಡ ಚಲನಚಿತ್ರಗಳಿಂದಲೂ ಅವಕಾಶ ಒದಗಿ ಬರುತ್ತಿದೆ. ಐದಾರು ಚಿತ್ರಗಳಿಗೆ ಕರೆ ಬಂದಿದ್ದು, ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದರು.

ಶೇ. 50ರಷ್ಟು ಹಣ ಸಮಾಜ ಸೇವೆಗೆ

ಬಿಗ್‌ಬಾಸ್‌ನಲ್ಲಿ ಗೆದ್ದ ಶೇ. 50ರಷ್ಟು ಹಣವನ್ನು ಸ್ವಂತಕ್ಕೆ ಬಳಸುತ್ತೇನೆ. ಉಳಿದ ಶೇ. 50ರಷ್ಟನ್ನು ಸೂರಿಲ್ಲದೆ ಕಷ್ಟಪಡುತ್ತಿರುವ ಮೂರು ಕುಟುಂಬಗಳ ಸಹಾಯಕ್ಕೆ ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವ ತುಳು, ಕನ್ನಡ ಕಲಾವಿದರಿಗೆ ವಿನಿಯೋಗಿಸಬೇಕು ಎಂದು ಅಂದುಕೊಂಡಿದ್ದೇನೆ ಎಂದು ರೂಪೇಶ್‌ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

38 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

48 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago