ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಕರಾವಳಿಯ ಶೈನ್ ಶೆಟ್ಟಿ -Vishwanews24

ಬೆಂಗಳೂರು: ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಬಿಗ್‍ಬಾಸ್ ವೇದಿಕೆಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಅವರ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದರು. ಇದೇ ವೇಳೆ ಸುದೀಪ್ ಬಲಕ್ಕೆ ನಿಂತಿದ್ದ ಪ್ರಬಲ ಸ್ಪರ್ಧಿ ಕುರಿ ಪ್ರತಾಪ್  ರನ್ನರ್ ಅಪ್ ಆದರು.

ಶೈನ್, ವಾಸುಕಿ ಮತ್ತು ಕುರಿ ಪ್ರತಾಪ್ ಮಧ್ಯೆ ಭರ್ಜರಿ ಸ್ಪರ್ಧೆ ನಡೆದಿತ್ತು. ಟಾಪ್ 2ನಲ್ಲಿ ವಾಸುಕಿ ವೈಭವ್ ಇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರು ಭೂಮಿ, ದೀಪಿಕಾ ದಾಸ್ ಬಳಿಕ ಭಾನುವಾರದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದರು. ಹೀಗಾಗಿ ವಾಸುಕಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ. ಇತ್ತ ಶೈನ್ ಶೆಟ್ಟಿ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಬಿಗ್ ಪೈಟ್ ನಡೆದಿತ್ತು. ಕೊನೆಗೆ ಆಲ್‍ರೌಂಡರ್ ಶೈನ್ ಶೆಟ್ಟಿ ಬಿಗ್ ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದಾರೆ.

ಕುಂದಾಪುರದ ಹುಡುಗ ಶೈನ್ ಶೆಟ್ಟಿ:  ಬಿಗ್‌ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಮೂಲತಃ ಕುಂದಾಪುರದವರು. ಬಳಿಕ ಬೆಂಗಳೂರಿಗೆ ಬಂದ ಇವರು ‘ಲಕ್ಷ್ಮೀ ಬಾರಮ್ಮ ಮೀರಾ ಮಾಧವ’ ಧಾರಾವಾಹಿ ಹಾಗೂ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.

ಚಿತ್ರರಂಗದಲ್ಲಿ ಮಿಂಚಬೇಕು ಎಂಬ ಮಹದಾಸೆ ಹೊಂದಿರುವ ಇವರಿಗೆ ಅದೃಷ್ಟ ಸಹಕರಿಸದ್ದರಿಂದ ಅನಿವಾರ್ಯವಾಗಿ ಹೊಟೇಲ್ ಉದ್ಯಮದತ್ತ ಹೊರಳಬೇಕಾಯಿತು‌.

‘ಗಲ್ಲಿ ಕಿಚನ್’ ಎಂಬ ಫುಡ್ ಟ್ರಕ್ ಆರಂಭಿಸಿ ಜೀವನ ಸಾಗಿಸುತ್ತಿರುವಾಗ ಇವರಿಗೆ ‘ಬಿಗ್‌ಬಾಸ್’ ಸ್ಪರ್ಧಿ ಆಗುವ ಅವಕಾಶ ಒದಗಿ ಬಂತು. ಆಗಿದ್ದಾಗಲಿ ಎಂದು ಬಿಗ್‌ಬಾಸ್ ಮನೆಗೆ ಪ್ರವೇಶಿಸಿದ ಶೈನ್ ಈಗ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago