ಬೆಂಗಳೂರು: ಬಿಗ್ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಬಿಗ್ಬಾಸ್ ವೇದಿಕೆಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಅವರ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದರು. ಇದೇ ವೇಳೆ ಸುದೀಪ್ ಬಲಕ್ಕೆ ನಿಂತಿದ್ದ ಪ್ರಬಲ ಸ್ಪರ್ಧಿ ಕುರಿ ಪ್ರತಾಪ್ ರನ್ನರ್ ಅಪ್ ಆದರು.
ಶೈನ್, ವಾಸುಕಿ ಮತ್ತು ಕುರಿ ಪ್ರತಾಪ್ ಮಧ್ಯೆ ಭರ್ಜರಿ ಸ್ಪರ್ಧೆ ನಡೆದಿತ್ತು. ಟಾಪ್ 2ನಲ್ಲಿ ವಾಸುಕಿ ವೈಭವ್ ಇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರು ಭೂಮಿ, ದೀಪಿಕಾ ದಾಸ್ ಬಳಿಕ ಭಾನುವಾರದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದರು. ಹೀಗಾಗಿ ವಾಸುಕಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ. ಇತ್ತ ಶೈನ್ ಶೆಟ್ಟಿ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಬಿಗ್ ಪೈಟ್ ನಡೆದಿತ್ತು. ಕೊನೆಗೆ ಆಲ್ರೌಂಡರ್ ಶೈನ್ ಶೆಟ್ಟಿ ಬಿಗ್ ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದಾರೆ.
ಕುಂದಾಪುರದ ಹುಡುಗ ಶೈನ್ ಶೆಟ್ಟಿ: ಬಿಗ್ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಮೂಲತಃ ಕುಂದಾಪುರದವರು. ಬಳಿಕ ಬೆಂಗಳೂರಿಗೆ ಬಂದ ಇವರು ‘ಲಕ್ಷ್ಮೀ ಬಾರಮ್ಮ ಮೀರಾ ಮಾಧವ’ ಧಾರಾವಾಹಿ ಹಾಗೂ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಚಿತ್ರರಂಗದಲ್ಲಿ ಮಿಂಚಬೇಕು ಎಂಬ ಮಹದಾಸೆ ಹೊಂದಿರುವ ಇವರಿಗೆ ಅದೃಷ್ಟ ಸಹಕರಿಸದ್ದರಿಂದ ಅನಿವಾರ್ಯವಾಗಿ ಹೊಟೇಲ್ ಉದ್ಯಮದತ್ತ ಹೊರಳಬೇಕಾಯಿತು.
‘ಗಲ್ಲಿ ಕಿಚನ್’ ಎಂಬ ಫುಡ್ ಟ್ರಕ್ ಆರಂಭಿಸಿ ಜೀವನ ಸಾಗಿಸುತ್ತಿರುವಾಗ ಇವರಿಗೆ ‘ಬಿಗ್ಬಾಸ್’ ಸ್ಪರ್ಧಿ ಆಗುವ ಅವಕಾಶ ಒದಗಿ ಬಂತು. ಆಗಿದ್ದಾಗಲಿ ಎಂದು ಬಿಗ್ಬಾಸ್ ಮನೆಗೆ ಪ್ರವೇಶಿಸಿದ ಶೈನ್ ಈಗ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…