ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಕರಾವಳಿಯ ಶೈನ್ ಶೆಟ್ಟಿ -Vishwanews24

ಬೆಂಗಳೂರು: ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಬಿಗ್‍ಬಾಸ್ ವೇದಿಕೆಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಅವರ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದರು. ಇದೇ ವೇಳೆ ಸುದೀಪ್ ಬಲಕ್ಕೆ ನಿಂತಿದ್ದ ಪ್ರಬಲ ಸ್ಪರ್ಧಿ ಕುರಿ ಪ್ರತಾಪ್  ರನ್ನರ್ ಅಪ್ ಆದರು.

ಶೈನ್, ವಾಸುಕಿ ಮತ್ತು ಕುರಿ ಪ್ರತಾಪ್ ಮಧ್ಯೆ ಭರ್ಜರಿ ಸ್ಪರ್ಧೆ ನಡೆದಿತ್ತು. ಟಾಪ್ 2ನಲ್ಲಿ ವಾಸುಕಿ ವೈಭವ್ ಇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರು ಭೂಮಿ, ದೀಪಿಕಾ ದಾಸ್ ಬಳಿಕ ಭಾನುವಾರದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದರು. ಹೀಗಾಗಿ ವಾಸುಕಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ. ಇತ್ತ ಶೈನ್ ಶೆಟ್ಟಿ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಬಿಗ್ ಪೈಟ್ ನಡೆದಿತ್ತು. ಕೊನೆಗೆ ಆಲ್‍ರೌಂಡರ್ ಶೈನ್ ಶೆಟ್ಟಿ ಬಿಗ್ ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದಾರೆ.

ಕುಂದಾಪುರದ ಹುಡುಗ ಶೈನ್ ಶೆಟ್ಟಿ:  ಬಿಗ್‌ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಮೂಲತಃ ಕುಂದಾಪುರದವರು. ಬಳಿಕ ಬೆಂಗಳೂರಿಗೆ ಬಂದ ಇವರು ‘ಲಕ್ಷ್ಮೀ ಬಾರಮ್ಮ ಮೀರಾ ಮಾಧವ’ ಧಾರಾವಾಹಿ ಹಾಗೂ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.

ಚಿತ್ರರಂಗದಲ್ಲಿ ಮಿಂಚಬೇಕು ಎಂಬ ಮಹದಾಸೆ ಹೊಂದಿರುವ ಇವರಿಗೆ ಅದೃಷ್ಟ ಸಹಕರಿಸದ್ದರಿಂದ ಅನಿವಾರ್ಯವಾಗಿ ಹೊಟೇಲ್ ಉದ್ಯಮದತ್ತ ಹೊರಳಬೇಕಾಯಿತು‌.

‘ಗಲ್ಲಿ ಕಿಚನ್’ ಎಂಬ ಫುಡ್ ಟ್ರಕ್ ಆರಂಭಿಸಿ ಜೀವನ ಸಾಗಿಸುತ್ತಿರುವಾಗ ಇವರಿಗೆ ‘ಬಿಗ್‌ಬಾಸ್’ ಸ್ಪರ್ಧಿ ಆಗುವ ಅವಕಾಶ ಒದಗಿ ಬಂತು. ಆಗಿದ್ದಾಗಲಿ ಎಂದು ಬಿಗ್‌ಬಾಸ್ ಮನೆಗೆ ಪ್ರವೇಶಿಸಿದ ಶೈನ್ ಈಗ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

3 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

3 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago