ಬಿಗ್‍ಬಾಸ್ ಸೀಸನ್ 7 : ಅಭಿಮಾನಿಗಳಿಗೆ ಶೈನ್ ಶೆಟ್ಟಿ ಪತ್ರ -Vishwanews24

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಒಂದು ವಾರದಲ್ಲಿ ಫಿನಾಲೆ ತಲುಪಲಿದೆ. ಇದೀಗ ಬಿಗ್‍ಮನೆಯಿಂದಲೇ ಶೈನ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಶುಕ್ರವಾರ ಬಿಗ್ ಮನೆಗೆ ಅತಿಥಿಯಾಗಿ ‘ಪುಟ್ಟಗೌರಿ ಮದುವೆ’ ಸೀರಿಯಲ್ ಖ್ಯಾತಿಯ ನಟಿ ರಂಜನಿ ಹೋಗಿದ್ದರು. ಅವರು ಬರುವ ಮುನ್ನ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಒಂದು ಪತ್ರ ಬರೆಯುವಂತೆ ಹೇಳಿದ್ದರು. ಅಂದರೆ 100 ದಿನಗಳನ್ನು ಮುಗಿಸಿದ್ದೀರಿ. ಅಲ್ಲದೇ ಈ ಬಿಗ್‍ಬಾಸ್ ಮನೆಯಲ್ಲಿ ನಿಮ್ಮ ಪಯಣದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಏನಾದರೂ ಹೇಳಲು ಇಚ್ಛಿಸುವವರು ಈ ಪತ್ರದಲ್ಲಿ ನಿಮ್ಮ ಅನಿಸಿಕೆಯನ್ನು ಬರೆದುಕೊಡಿ. ಅದನ್ನು ನಿಮ್ಮ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಇತ್ಯಾದಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ತಿಳಿಸಿದ್ದರು.

ಅದರಂತೆಯೇ ಸ್ಪರ್ಧಿಗಳು ತಮಗೆ ಅನಿಸಿಕೆಯನ್ನು ಪತ್ರದ ಮೂಲಕ ಬರೆದು ತಿಳಿಸಿದ್ದಾರೆ.

ಶೈನ್ ಪತ್ರದಲ್ಲಿ ಏನಿದೆ?
“103 ದಿನಗಳ ಕಳೆದು, 112 ದಿನದತ್ತ ಸಾಗುತ್ತಿದ್ದೇನೆ. ಜೀವನದಲ್ಲಿ ಕಳೆದುಕೊಂಡಿದ್ದು, ಪಡೆದುಕೊಂಡಿದ್ದು ಎರಡು ಇದೆ. ಆದರೆ ಈ ಹೊಸ ತಿರುವಿನಲ್ಲಿ ನಾನು ಕೇವಲ ಗಳಿಸಿದ್ದೇನೆ. ಸ್ನೇಹಿತರು, ಜೀವದ ಗೆಳೆಯ, ಸುಂದರ ನೆನಪುಗಳನ್ನು ಗಳಿಸಿದ್ದೇನೆ. ಬರೀ ಪಾತ್ರವಾಗಿ ಪರಿಚಿತನಾಗಿದ್ದ ನನ್ನನ್ನು ಎಲ್ಲಾ ಕಲಾಭಿಮಾನಿಗಳಿಗೆ ಶೈನ್ ಶೆಟ್ಟಿಯಾಗಿ ಪರಿಚಿತನಾಗಲು ಅವಕಾಶವಾಗಿದ್ದೇ ಈ ‘ಬಿಗ್‍ಬಾಸ್’ ವೇದಿಕೆಯಿಂದ”

“ಈ ಸುಂದರವಾದ ಅನುಭವವನ್ನು ಅನುಭವಿಸಿ, ನನ್ನ ಪಯಣವನ್ನು ಸಾಧನೆಯತ್ತ ಕೊಂಡ್ಯೊಯಲು ಸಾಧ್ಯವಾಗಿದೆ ಎಂದರೆ ಅದಕ್ಕೆ ಕಾರಣ ನೀವು, ನಿಮ್ಮ ಪ್ರೀತಿ, ನಿಮ್ಮ ಬೆಂಬಲ, ನಿನ್ನ ವೋಟುಗಳು. ಉಸಿರಿರುವವರೆಗೂ ನಿಮ್ಮನ್ನೆಲ್ಲಾ ಕಲಾ ಸೇವೆಯ ಮೂಲಕ ರಂಜಿಸುತ್ತೇನೆ. ನಿಮ್ಮ ಅಗಾಧವಾದ ಪ್ರೀತಿ, ಹಾರೈಕೆ ಹಾಗೂ ಅಭಿಮಾನಕ್ಕೆ ಸದಾ ಚಿರಋಣಿಯಾಗಿರುವ ನಿಮ್ಮ ನಲ್ಮೆಯ ಶೈನ್ ಶೆಟ್ಟಿ” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

11 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago