ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಒಂದು ವಾರದಲ್ಲಿ ಫಿನಾಲೆ ತಲುಪಲಿದೆ. ಇದೀಗ ಬಿಗ್ಮನೆಯಿಂದಲೇ ಶೈನ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಶುಕ್ರವಾರ ಬಿಗ್ ಮನೆಗೆ ಅತಿಥಿಯಾಗಿ ‘ಪುಟ್ಟಗೌರಿ ಮದುವೆ’ ಸೀರಿಯಲ್ ಖ್ಯಾತಿಯ ನಟಿ ರಂಜನಿ ಹೋಗಿದ್ದರು. ಅವರು ಬರುವ ಮುನ್ನ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಒಂದು ಪತ್ರ ಬರೆಯುವಂತೆ ಹೇಳಿದ್ದರು. ಅಂದರೆ 100 ದಿನಗಳನ್ನು ಮುಗಿಸಿದ್ದೀರಿ. ಅಲ್ಲದೇ ಈ ಬಿಗ್ಬಾಸ್ ಮನೆಯಲ್ಲಿ ನಿಮ್ಮ ಪಯಣದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಏನಾದರೂ ಹೇಳಲು ಇಚ್ಛಿಸುವವರು ಈ ಪತ್ರದಲ್ಲಿ ನಿಮ್ಮ ಅನಿಸಿಕೆಯನ್ನು ಬರೆದುಕೊಡಿ. ಅದನ್ನು ನಿಮ್ಮ ಫೇಸ್ಬುಕ್, ಇನ್ಸ್ಟಾಗ್ರಾಂ ಇತ್ಯಾದಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ತಿಳಿಸಿದ್ದರು.
ಅದರಂತೆಯೇ ಸ್ಪರ್ಧಿಗಳು ತಮಗೆ ಅನಿಸಿಕೆಯನ್ನು ಪತ್ರದ ಮೂಲಕ ಬರೆದು ತಿಳಿಸಿದ್ದಾರೆ.
ಶೈನ್ ಪತ್ರದಲ್ಲಿ ಏನಿದೆ?
“103 ದಿನಗಳ ಕಳೆದು, 112 ದಿನದತ್ತ ಸಾಗುತ್ತಿದ್ದೇನೆ. ಜೀವನದಲ್ಲಿ ಕಳೆದುಕೊಂಡಿದ್ದು, ಪಡೆದುಕೊಂಡಿದ್ದು ಎರಡು ಇದೆ. ಆದರೆ ಈ ಹೊಸ ತಿರುವಿನಲ್ಲಿ ನಾನು ಕೇವಲ ಗಳಿಸಿದ್ದೇನೆ. ಸ್ನೇಹಿತರು, ಜೀವದ ಗೆಳೆಯ, ಸುಂದರ ನೆನಪುಗಳನ್ನು ಗಳಿಸಿದ್ದೇನೆ. ಬರೀ ಪಾತ್ರವಾಗಿ ಪರಿಚಿತನಾಗಿದ್ದ ನನ್ನನ್ನು ಎಲ್ಲಾ ಕಲಾಭಿಮಾನಿಗಳಿಗೆ ಶೈನ್ ಶೆಟ್ಟಿಯಾಗಿ ಪರಿಚಿತನಾಗಲು ಅವಕಾಶವಾಗಿದ್ದೇ ಈ ‘ಬಿಗ್ಬಾಸ್’ ವೇದಿಕೆಯಿಂದ”
“ಈ ಸುಂದರವಾದ ಅನುಭವವನ್ನು ಅನುಭವಿಸಿ, ನನ್ನ ಪಯಣವನ್ನು ಸಾಧನೆಯತ್ತ ಕೊಂಡ್ಯೊಯಲು ಸಾಧ್ಯವಾಗಿದೆ ಎಂದರೆ ಅದಕ್ಕೆ ಕಾರಣ ನೀವು, ನಿಮ್ಮ ಪ್ರೀತಿ, ನಿಮ್ಮ ಬೆಂಬಲ, ನಿನ್ನ ವೋಟುಗಳು. ಉಸಿರಿರುವವರೆಗೂ ನಿಮ್ಮನ್ನೆಲ್ಲಾ ಕಲಾ ಸೇವೆಯ ಮೂಲಕ ರಂಜಿಸುತ್ತೇನೆ. ನಿಮ್ಮ ಅಗಾಧವಾದ ಪ್ರೀತಿ, ಹಾರೈಕೆ ಹಾಗೂ ಅಭಿಮಾನಕ್ಕೆ ಸದಾ ಚಿರಋಣಿಯಾಗಿರುವ ನಿಮ್ಮ ನಲ್ಮೆಯ ಶೈನ್ ಶೆಟ್ಟಿ” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…