ಬಿಗ್ ಬಾಸ್ ತೆಲುಗು 7′ ಗ್ರ್ಯಾಂಡ್ ಫಿನಾಲೆ : ಯುವ ರೈತ ಪಲ್ಲವಿ ಪ್ರಶಾಂತ್‌ಗೆ ಒಲಿದ ವಿನ್ನರ್‌ ಪಟ್ಟ – vishwanews24

Featured, ರಾಷ್ಟ್ರ ನ್ಯೂಸ್

ಬಿಗ್ ಬಾಸ್ ತೆಲುಗು 7′ ಗ್ರ್ಯಾಂಡ್ ಫಿನಾಲೆ : ಯುವ ರೈತ ಪಲ್ಲವಿ ಪ್ರಶಾಂತ್‌ಗೆ ಒಲಿದ ವಿನ್ನರ್‌ ಪಟ್ಟ

ಹೈದರಾಬಾದ್: ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುವ ಬಿಗ್‌ ಬಾಸ್‌ ತೆಲುಗು ಸೀಸನ್‌ 7 ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ವೀಕ್ಷಕರ ಮೆಚ್ಚಿನ ಸ್ಪರ್ಧಿ ವೋಟಿನ ಲೆಕ್ಕಚಾರದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ತೆಲುಗು ಬಿಗ್‌ ಬಾಸ್‌ ಸೀಸನ್‌ 7 ಕಾರ್ಯಕ್ರಮ ಮುಕ್ತಾಯ ಕಂಡಿದ್ದು, ಭಾನುವಾರ ನಡೆದ ಫಿನಾಲೆಯಲ್ಲಿ ಅಕ್ಕಿನೇನಿ ವಿನ್ನರ್‌ ನ್ನು ಅನೌನ್ಸ್ ಮಾಡಿದ್ದಾರೆ. ಆ ಮೂಲಕ ವೀಕ್ಷಕರಿಂದ ಅತೀ ಹೆಚ್ಚು ಮತ ಪಡೆದ ಪಲ್ಲವಿ ಪ್ರಶಾಂತ್‌ ಬಿಗ್‌ ಬಾಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ನಾಗಾರ್ಜುನ ಐದನೇ ಬಾರಿಗೆ ತೆಲುಗು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರಾಗಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಮೊದಲ ಸೀಸನ್ ನ್ನು ಜೂನಿಯರ್ ಎನ್‌ಟಿಆರ್ ಹೋಸ್ಟ್ ಮಾಡಿದ್ದರು. ಎರಡನೇ ಸೀಸನ್ ಅನ್ನು ನಾನಿ ಹೋಸ್ಟ್ ಮಾಡಿದ್ದರು.

ಶಿರೂರು ದೋಣಿ ಮಗುಚಿ ಮೀನುಗಾರರ ಸಾವು: ಸಚಿವೆ ಹೆಬ್ಬಾಳಕರ್ ಸಂತಾಪ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – vishwanews24

ಭಾನುವಾರ(ಡಿ.17 ರಂದು) ಸ್ಟಾರ್‌ ಮಾ ವಾಹಿನಿ/ ಡಿಸ್ನಿ + ಹಾಟ್‌ ಸ್ಟಾರ್‌ ನಲ್ಲಿ ಪ್ರಸಾರ ಕಂಡ ಬಿಗ್‌ ಬಾಸ್‌ ಫಿನಾಲೆಯಲ್ಲಿ ಪ್ರಸಾರ ಕಂಡಿದೆ. ಈ ಬಾರಿ ಪಲ್ಲವಿ ಪ್ರಶಾಂತ್, ಅಮರದೀಪ್ ಚೌಧರಿ, ಅರ್ಜುನ್ ಅಂಬಟಿ, ಪ್ರಿಯಾಂಕಾ ಜೈನ್, ಶಿವಾಜಿ ಮತ್ತು ಪ್ರಿನ್ಸ್ ಯವರ್ ಫೈನಲಿಸ್ಟ್‌ ಆಗಿದ್ದರು.

ಇವರಲ್ಲಿ ವೀಕ್ಷಕರ ಅತೀ ಹೆಚ್ಚು ಮತ ಪಡೆದು ಪಲ್ಲವಿ ಪ್ರಶಾಂತ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಅಮರದೀಪ್ ರನ್ನರ್‌ ಅಪ್‌ ಆಗಿದ್ದಾರೆ. ಪಲ್ಲವಿ ಪ್ರಶಾಂತ್‌ ಅವರಿಗೆ ಟ್ರೋಫಿ ಜೊತೆ 35 ಲಕ್ಷ ನಗದು ಬಹುಮಾನ ಸಿಕ್ಕಿದೆ.

ಯಾರು ಈ ಪಲ್ಲವಿ ಪ್ರಶಾಂತ್:

ತೆಲಂಗಾಣದ ಹಳ್ಳಿಯೊಂದರಲ್ಲಿ ಬೆಳೆದ ಪಲ್ಲವಿ ಪ್ರಶಾಂತ್‌ ವೃತ್ತಿಯಲ್ಲಿ ರೈತನಾಗಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್‌ ಚಾನೆಲ್‌ ನ್ನು ಹೊಂದಿದ್ದಾರೆ. ಕೃಷಿ ಸಂಬಂಧಿತ ನಿತ್ಯದ ವ್ಲಾಗ್‌ ಗಳನ್ನು ಅವರು ಅಪ್ಲೋಡ್‌ ಮಾಡುತ್ತಿರುತ್ತಾರೆ. ʼನಾನೊಬ್ಬ ರೈತ..ʼ ಎನ್ನುವ  ಅವರ ವಿಡಿಯೋ ವೈರಲ್‌ ಆಗಿದೆ. ರೀಲ್ಸ್‌ ಹಾಗೂ ವಿಡಿಯೋಗಳಿಂದಲೇ ಅವರು ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ. ‌ಗದ್ದೆಬದಿಯ ಕೆಲಸದ ರೀಲ್ಸ್‌, ರೈತರ ಬಗೆಗಿನ ರೀಲ್ಸ್‌ ಹಾಗೂ ವ್ಲಾಗ್‌ ಮಾಡಿಯೇ ಅಪಾರ ಫಾಲೋವರ್ಸ್‌ ಗಳನ್ನು ಪ್ರಶಾಂತ್‌ ಪಡೆದುಕೊಂಡಿದ್ದು. ಬಿಗ್‌ ಬಾಸ್‌ ಕಾರ್ಯಕ್ರಮದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಸೆಲೆಬ್ರಿಟಿಗಳೊಂದಿಗೆ ಸಾಮಾನ್ಯವಾಗಿ ದೊಡ್ಮನೆಯಲ್ಲಿ ನೂರು ದಿನ ಕಳೆದ ಪ್ರಶಾಂತ್‌ ಈಗ ಸಾಮಾನ್ಯದಿಂದ ಸೆಲೆಬ್ರಿಟಿಯಾಗಿದ್ದಾರೆ.

ಅವರ ಬಿಗ್‌ ಬಾಸ್‌ ಪಯಣ ಟ್ರೋಲ್‌ ನಿಂದ ಆರಂಭವಾಗಿ, ಸ್ಪೂರ್ತಿದಾಯಕವಾಗುವವರೆಗಿನ ರೋಚಕತೆಯಿಂದ ಕೂಡಿತ್ತು ಎನ್ನುವುದು ವೀಕ್ಷಕರ ಅಭಿಪ್ರಾಯ.

ಮಂಗಳೂರು : ನಗರದಲ್ಲಿ ಖೋಟಾ ನೋಟು ಜಾಲ, ಓರ್ವನ ಬಂಧನ..vishwanews24

ಫಿನಾಲೆ ಸ್ಪರ್ಧಿಯಾಗಿದ್ದ ಪ್ರಿನ್ಸ್ ಯವರ್ ಅವರು 15 ಲಕ್ಷ ರೂ. ಸೂಟ್‌ ಕೇಸ್ ಹಣ ಪಡೆದು ಫಿನಾಲೆಯಿಂದ ಕೆಳಗಿಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಟ ರವಿತೇಜ ಭಾಗಿಯಾಗಿದ್ದರು.

Leave a Reply