Featured

ಬಿಗ್ ಬಾಸ್ ತೆಲುಗು 7′ ಗ್ರ್ಯಾಂಡ್ ಫಿನಾಲೆ : ಯುವ ರೈತ ಪಲ್ಲವಿ ಪ್ರಶಾಂತ್‌ಗೆ ಒಲಿದ ವಿನ್ನರ್‌ ಪಟ್ಟ – vishwanews24

ಬಿಗ್ ಬಾಸ್ ತೆಲುಗು 7′ ಗ್ರ್ಯಾಂಡ್ ಫಿನಾಲೆ : ಯುವ ರೈತ ಪಲ್ಲವಿ ಪ್ರಶಾಂತ್‌ಗೆ ಒಲಿದ ವಿನ್ನರ್‌ ಪಟ್ಟ

ಹೈದರಾಬಾದ್: ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುವ ಬಿಗ್‌ ಬಾಸ್‌ ತೆಲುಗು ಸೀಸನ್‌ 7 ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ವೀಕ್ಷಕರ ಮೆಚ್ಚಿನ ಸ್ಪರ್ಧಿ ವೋಟಿನ ಲೆಕ್ಕಚಾರದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ತೆಲುಗು ಬಿಗ್‌ ಬಾಸ್‌ ಸೀಸನ್‌ 7 ಕಾರ್ಯಕ್ರಮ ಮುಕ್ತಾಯ ಕಂಡಿದ್ದು, ಭಾನುವಾರ ನಡೆದ ಫಿನಾಲೆಯಲ್ಲಿ ಅಕ್ಕಿನೇನಿ ವಿನ್ನರ್‌ ನ್ನು ಅನೌನ್ಸ್ ಮಾಡಿದ್ದಾರೆ. ಆ ಮೂಲಕ ವೀಕ್ಷಕರಿಂದ ಅತೀ ಹೆಚ್ಚು ಮತ ಪಡೆದ ಪಲ್ಲವಿ ಪ್ರಶಾಂತ್‌ ಬಿಗ್‌ ಬಾಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ನಾಗಾರ್ಜುನ ಐದನೇ ಬಾರಿಗೆ ತೆಲುಗು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರಾಗಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಮೊದಲ ಸೀಸನ್ ನ್ನು ಜೂನಿಯರ್ ಎನ್‌ಟಿಆರ್ ಹೋಸ್ಟ್ ಮಾಡಿದ್ದರು. ಎರಡನೇ ಸೀಸನ್ ಅನ್ನು ನಾನಿ ಹೋಸ್ಟ್ ಮಾಡಿದ್ದರು.

ಭಾನುವಾರ(ಡಿ.17 ರಂದು) ಸ್ಟಾರ್‌ ಮಾ ವಾಹಿನಿ/ ಡಿಸ್ನಿ + ಹಾಟ್‌ ಸ್ಟಾರ್‌ ನಲ್ಲಿ ಪ್ರಸಾರ ಕಂಡ ಬಿಗ್‌ ಬಾಸ್‌ ಫಿನಾಲೆಯಲ್ಲಿ ಪ್ರಸಾರ ಕಂಡಿದೆ. ಈ ಬಾರಿ ಪಲ್ಲವಿ ಪ್ರಶಾಂತ್, ಅಮರದೀಪ್ ಚೌಧರಿ, ಅರ್ಜುನ್ ಅಂಬಟಿ, ಪ್ರಿಯಾಂಕಾ ಜೈನ್, ಶಿವಾಜಿ ಮತ್ತು ಪ್ರಿನ್ಸ್ ಯವರ್ ಫೈನಲಿಸ್ಟ್‌ ಆಗಿದ್ದರು.

ಇವರಲ್ಲಿ ವೀಕ್ಷಕರ ಅತೀ ಹೆಚ್ಚು ಮತ ಪಡೆದು ಪಲ್ಲವಿ ಪ್ರಶಾಂತ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಅಮರದೀಪ್ ರನ್ನರ್‌ ಅಪ್‌ ಆಗಿದ್ದಾರೆ. ಪಲ್ಲವಿ ಪ್ರಶಾಂತ್‌ ಅವರಿಗೆ ಟ್ರೋಫಿ ಜೊತೆ 35 ಲಕ್ಷ ನಗದು ಬಹುಮಾನ ಸಿಕ್ಕಿದೆ.

ಯಾರು ಈ ಪಲ್ಲವಿ ಪ್ರಶಾಂತ್:

ತೆಲಂಗಾಣದ ಹಳ್ಳಿಯೊಂದರಲ್ಲಿ ಬೆಳೆದ ಪಲ್ಲವಿ ಪ್ರಶಾಂತ್‌ ವೃತ್ತಿಯಲ್ಲಿ ರೈತನಾಗಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್‌ ಚಾನೆಲ್‌ ನ್ನು ಹೊಂದಿದ್ದಾರೆ. ಕೃಷಿ ಸಂಬಂಧಿತ ನಿತ್ಯದ ವ್ಲಾಗ್‌ ಗಳನ್ನು ಅವರು ಅಪ್ಲೋಡ್‌ ಮಾಡುತ್ತಿರುತ್ತಾರೆ. ʼನಾನೊಬ್ಬ ರೈತ..ʼ ಎನ್ನುವ  ಅವರ ವಿಡಿಯೋ ವೈರಲ್‌ ಆಗಿದೆ. ರೀಲ್ಸ್‌ ಹಾಗೂ ವಿಡಿಯೋಗಳಿಂದಲೇ ಅವರು ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ. ‌ಗದ್ದೆಬದಿಯ ಕೆಲಸದ ರೀಲ್ಸ್‌, ರೈತರ ಬಗೆಗಿನ ರೀಲ್ಸ್‌ ಹಾಗೂ ವ್ಲಾಗ್‌ ಮಾಡಿಯೇ ಅಪಾರ ಫಾಲೋವರ್ಸ್‌ ಗಳನ್ನು ಪ್ರಶಾಂತ್‌ ಪಡೆದುಕೊಂಡಿದ್ದು. ಬಿಗ್‌ ಬಾಸ್‌ ಕಾರ್ಯಕ್ರಮದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಸೆಲೆಬ್ರಿಟಿಗಳೊಂದಿಗೆ ಸಾಮಾನ್ಯವಾಗಿ ದೊಡ್ಮನೆಯಲ್ಲಿ ನೂರು ದಿನ ಕಳೆದ ಪ್ರಶಾಂತ್‌ ಈಗ ಸಾಮಾನ್ಯದಿಂದ ಸೆಲೆಬ್ರಿಟಿಯಾಗಿದ್ದಾರೆ.

ಅವರ ಬಿಗ್‌ ಬಾಸ್‌ ಪಯಣ ಟ್ರೋಲ್‌ ನಿಂದ ಆರಂಭವಾಗಿ, ಸ್ಪೂರ್ತಿದಾಯಕವಾಗುವವರೆಗಿನ ರೋಚಕತೆಯಿಂದ ಕೂಡಿತ್ತು ಎನ್ನುವುದು ವೀಕ್ಷಕರ ಅಭಿಪ್ರಾಯ.

ಫಿನಾಲೆ ಸ್ಪರ್ಧಿಯಾಗಿದ್ದ ಪ್ರಿನ್ಸ್ ಯವರ್ ಅವರು 15 ಲಕ್ಷ ರೂ. ಸೂಟ್‌ ಕೇಸ್ ಹಣ ಪಡೆದು ಫಿನಾಲೆಯಿಂದ ಕೆಳಗಿಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಟ ರವಿತೇಜ ಭಾಗಿಯಾಗಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago