ಬಿಗ್ ಬ್ರೇಕಿಂಗ್! ಎಂ.ಬಿ.ಪಾಟೀಲ್ ರ ಅಕ್ರಮವನ್ನು ದಾಖಲೆಗಳೊಂದಿಗೆ ಬಯಲುಗೆಳೆದ ಬಿ.ಎಸ್.ವೈ..
ಲಿಂಗಾಯತ ಸ್ವತಂತ್ರ ಧರ್ಮ ರಚನೆಯಲ್ಲಿ ಮುಂಚೂಣಿ ವಹಿಸಿದ್ದ ಕರ್ನಾಟಕ ರಾಜ್ಯದ ನೀರಾವರಿ ಸಚಿವ ಎಂ.ಬಿ.ಪಾಟೀಲ್ ರವರ ಹಗರಣವನ್ನು ಬಯಲಿಗೆಳೆದ ಬಿ.ಎಸ್.ಯಡಿಯೂರಪ್ಪ.
ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ, ಬಿ.ಎಸ್.ವೈ ಆರೋಪ!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಮೇಲೆ ಗಂಭೀರ ಆರೋಪ ಮಾಡಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪನವರು, ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಆರೋಪ ಮಾಡಿದ್ದು, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ 25 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಹೇಳಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಇದರ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪನವರು, ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ, ನಾವೇ ದೇಶದ ನಂಬರ್ 1 ಎಂದು ಹೇಳುವ ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ನಾವು ಬಿಡುಗಡೆ ಮಾಡಿರುವ ದಾಖಲೆಯನ್ನು ದಯವಿಟ್ಟು ನೋಡಿ 24 ಗಂಟೆಯೊಳಗೆ ಉತ್ತರ ಕೊಡಬೇಕು ಎಂದು ಹೇಳುವುದರ ಜೊತೆಗೆ ಹಾಗು ಈ ಗಂಭೀರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದ ಬಿ.ಎಸ್.ಯಡಿಯೂರಪ್ಪ..!!
25 ಕೋಟಿ ಕಿಕ್ ಬ್ಯಾಕ್ ಪಡೆದ ಸಚಿವ ಎಂಬಿ ಪಾಟೀಲ್ ರನ್ನು ಈ ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಎಸ್ ಯಡಿಯೂರಪ್ಪನವರು ಒತ್ತಾಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಹಲವಾರು ಅಕ್ರಮ ನಡೆದಿದೆ ಎಂದರು. ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದರು.
ಸದ್ಯದರಲ್ಲಿಯೇ ಕಾದಿದೆ ಬಿಗ್ ಬ್ರೇಕಿಂಗ್ ನ್ಯೂಸ್..!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಹಗರಣ ಬಯಲಿಗೆಳೆದಿರುವ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು, ಇನ್ನೆರಡು ದಿನಗಳಲ್ಲಿ ಮತ್ತೊಂದು ದೊಡ್ಡ ಹಗರಣ ಬಯಲಿಗೆ ಎಳೆಯುವೆನು ನಾಳೆ, ನಾಡಿದ್ದು ಕಾದು ನೋಡಿ ಎಂದು ಗುಡುಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…