ಬಿಗ್ ಬ್ರೇಕಿಂಗ್! ಎಂ.ಬಿ.ಪಾಟೀಲ್ ರ ಅಕ್ರಮವನ್ನು ದಾಖಲೆಗಳೊಂದಿಗೆ ಬಯಲುಗೆಳೆದ ಬಿ.ಎಸ್.ವೈ..
ಲಿಂಗಾಯತ ಸ್ವತಂತ್ರ ಧರ್ಮ ರಚನೆಯಲ್ಲಿ ಮುಂಚೂಣಿ ವಹಿಸಿದ್ದ ಕರ್ನಾಟಕ ರಾಜ್ಯದ ನೀರಾವರಿ ಸಚಿವ ಎಂ.ಬಿ.ಪಾಟೀಲ್ ರವರ ಹಗರಣವನ್ನು ಬಯಲಿಗೆಳೆದ ಬಿ.ಎಸ್.ಯಡಿಯೂರಪ್ಪ.
ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ, ಬಿ.ಎಸ್.ವೈ ಆರೋಪ!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಮೇಲೆ ಗಂಭೀರ ಆರೋಪ ಮಾಡಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪನವರು, ಭದ್ರಾ ಮೇಲ್ದಂಡೆ ಯೋಜನೆ ಟೆಂಡರ್ ನಲ್ಲಿ ಭಾರೀ ಅಕ್ರಮ ನಡೆದಿರುವುದಾಗಿ ಆರೋಪ ಮಾಡಿದ್ದು, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ 25 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಹೇಳಿ ದಾಖಲೆ ಬಿಡುಗಡೆ ಮಾಡಿದ್ದಾರೆ.
ಇದರ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪನವರು, ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ, ನಾವೇ ದೇಶದ ನಂಬರ್ 1 ಎಂದು ಹೇಳುವ ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ನಾವು ಬಿಡುಗಡೆ ಮಾಡಿರುವ ದಾಖಲೆಯನ್ನು ದಯವಿಟ್ಟು ನೋಡಿ 24 ಗಂಟೆಯೊಳಗೆ ಉತ್ತರ ಕೊಡಬೇಕು ಎಂದು ಹೇಳುವುದರ ಜೊತೆಗೆ ಹಾಗು ಈ ಗಂಭೀರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದ ಬಿ.ಎಸ್.ಯಡಿಯೂರಪ್ಪ..!!
25 ಕೋಟಿ ಕಿಕ್ ಬ್ಯಾಕ್ ಪಡೆದ ಸಚಿವ ಎಂಬಿ ಪಾಟೀಲ್ ರನ್ನು ಈ ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಎಸ್ ಯಡಿಯೂರಪ್ಪನವರು ಒತ್ತಾಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಇಂತಹ ಹಲವಾರು ಅಕ್ರಮ ನಡೆದಿದೆ ಎಂದರು. ಸಚಿವ ಎಂ.ಬಿ ಪಾಟೀಲರನ್ನು ಗಲ್ಲಿಗೇರಿಸಬೇಕು ಎಂದು ಆಕ್ರೋಶದಿಂದ ಹೇಳಿದರು.
ಸದ್ಯದರಲ್ಲಿಯೇ ಕಾದಿದೆ ಬಿಗ್ ಬ್ರೇಕಿಂಗ್ ನ್ಯೂಸ್..!!
ನೀರಾವರಿ ಸಚಿವ ಎಂ.ಬಿ.ಪಾಟೀಲರ ಹಗರಣ ಬಯಲಿಗೆಳೆದಿರುವ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರು, ಇನ್ನೆರಡು ದಿನಗಳಲ್ಲಿ ಮತ್ತೊಂದು ದೊಡ್ಡ ಹಗರಣ ಬಯಲಿಗೆ ಎಳೆಯುವೆನು ನಾಳೆ, ನಾಡಿದ್ದು ಕಾದು ನೋಡಿ ಎಂದು ಗುಡುಗಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…