ಬಿಜೆಪಿಗರ ಜೀನ್​ ಪಾಕಿಸ್ತಾನದಲ್ಲಿರಬಹುದು ಆದರೆ, ನನ್ನ ಜೀನ್ ಈ ಮಣ್ಣಿನಲ್ಲಿದೆ : ಎಚ್‌.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು : ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್‌ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಹರಿಹಾಯ್ದಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.

 

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಹೇಳಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

2 hours ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

2 hours ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

2 hours ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

2 hours ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

2 hours ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

3 hours ago