ಹಾಸನ: ಬಿಜೆಪಿ ಶಾಸಕರು ಸಾಚಗಳು ಅಂತ ಸಾಬೀತು ಮಾಡಲಿ ಆಗ ನಾವು ಡಿ.ಕೆ ಶಿವಕುಮಾರ್ ಬಂಧನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಆಕ್ರೋಶ ಹೊರಹಾಕಿದರು.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ. ಕೆ ಶಿವಕುಮಾರ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದ್ವೇಷದ ರಾಜಕಾರಣಕ್ಕೆ ಬಂಧಿಸಲಾಗಿದೆ , ಅವರಿಗಿಂತ ಪ್ರಬಲರು ಅನ್ನೊ ಕಾರಣಕ್ಕೆ ಈ ರೀತಿ ಮಾಡಿದ್ದಾರೆ, ಆದರೆ ಡಿ. ಕೆ ಶಿವಕುಮಾರ್ ಅವರನ್ನು ಕುಗ್ಗಿಸಲು ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಡಿ. ಕೆ ಶಿವಕುಮಾರ್ ತಂದೆಗೆ ಎಡೆ ಇಡ್ತಿನಿ ಅಂದರು. ಸೆಕ್ಯೂರಿಟಿ ಕೊಟ್ಟು ಕಳಿಸಬೇಕಿತ್ತು ಅವರೇನು ಕದ್ದು ಓಡ್ತಿರಲಿಲ್ಲ, ಮಾನವೀಯತೆ ಇರಬೇಕು, ಬಿಜೆಪಿಯವರು ಹಿಂದೂ ಸಂಸ್ಕೃತಿ ಬಗ್ಗೆ ಮಾತಾಡ್ತಾರೆ. ಆದರೆ ಇವತ್ತು ಆ ಸಂಸ್ಕೃತಿ ಇದ್ದಿದ್ದರೆ ತಂದೆಗೆ ಎಡೆ ಇಡಲು ಬಿಡಬೇಕಿತ್ತು ಎಂದರು,
ವರ್ಷಕ್ಕೆ ಒಂದು ಬಾರಿ ಬರುವ ಹಬ್ಬಕ್ಕೂ ಬಿಡಲ್ಲ ಅಂದರೇ ಹೇಗೆ..? ಇಷ್ಟರ ಮಟ್ಟಿನ ದ್ವೇಷರಾಜಕಾರಣ ಒಳ್ಳೆಯದಲ್ಲ ಎಂದು ಪ್ರಜ್ವಲ್ ರೇವಣ್ಣ ಅಸಮಾಧಾನ ಹೊರಹಾಕಿದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…