Featured

ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಪ್ರಧಾನಿ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ : ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ: ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಪ್ರಧಾನಿ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರ ಸರಕಾರದ ವಿರುದ್ಧ ಕೆಂಡಕಾರಿದ್ದಾರೆ.

ನನ್ನ ಬಳಿ ಎನ್ ಆರ್ ಸಿಯ ಯಾರಾದರೂ ದಾಖಲೆಗಳನ್ನು ಸಾಬೀತುಪಡಿಸಲು ಕೇಳಿದರೆ ನಾನು ಕೊಡಲು ಹೋಗುವುದಿಲ್ಲ ಯಾಕೆಂದರೆ ನಾನು ಭಾರತೀಯ. ಈ ವಿಚಾರದಲ್ಲಿ ಜೈಲಿಗೆ ಹೋಗಲು ಕೂಡ ಸಿದ್ದನಿದ್ದೇನೆ. ಈ ದೇಶದಲ್ಲಿ ಸುಪ್ರೀಂ ಕೋರ್ಟ್ ಜೀವಂತವಿದ್ದರೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮುದ್ರಕ್ಕೆ ಎಸೆಯಲಿ. ಸುಪ್ರೀ ಕೋರ್ಟ್ ಜನರಿಗೆ ರಕ್ಷಣೆ ಕೊಡುವ ಕೆಲಸ ಮಾಡಬೇಕು ಎಂದು ಹೇಳಿದರು.

 

ಉಡುಪಿಯಲ್ಲಿ ಮಾತನಾಡಿದ ಅವರು, ಜನವಿರೋಧಿ ದೇಶ ವಿರೋಧಿ ಸಂವಿಧಾನ ವಿರೋಧಿ ಎನ್ ಆರ್ ಸಿ, ಸಿಎಎ ಕಾಯಿದೆ ತರುವ ಮೂಲಕ ಬಿಜೆಪಿ ಭಾರತಕ್ಕೆ ಬೆಂಕಿ ಇಡುತ್ತಿದೆ.

ಭಾರತದಲ್ಲಿ 130 ಕೋಟಿ ಜನರೂ ಸಮಾನರು. ದೇಶದ ಧರ್ಮೀಯರಲ್ಲಿ ಬೇಧ ಭಾವ ಮಾಡಕೂಡದು. ಸಂವಿಧಾನದಲ್ಲಿ ಧಾರ್ಮಿಕ ವಿಭಜನೆಗೆ ಅವಕಾಶವಿಲ್ಲ ಎಂದು ಹೇಳಿದರು.

ಈ ಎರಡು ಕಾಯ್ದೆಯ ಮೂಲಕಬಿಜೆಪಿ ಈ ದೇಶಕ್ಕೆ ಬೆಂಕಿ ಕೊಡುತ್ತಿದೆ. ಜನ ಬೀದಿಗಿಳಿದು ಘರ್ಷಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರಕಾರ ಆರ್ಥಿಕವಾಗಿ ಭಾರತವನ್ನು ನಿರ್ಣಾಮ ಮಾಡಿಯಾಗಿದೆ, ಇದೀಗ ಬಾಂಗ್ಲಾದೇಶದ ಅರ್ಧದಷ್ಟು ಜಿಡಿಪಿಗೆ ಭಾರತ ಇಳಿದಿದೆ. ಇಂದಿರಾಗಾಂಧಿ ಕಟ್ಟಿದ ಬಾಂಗ್ಲಾದೇಶ ಸುಭದ್ರ ಆಗಿದೆ. ಭಾರತದ ಆರ್ಥಿಕ ತಳಹದಿಯೇ ಕುಸಿದಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ, ಮಹಾನ್ ನಾಯಕರು ಎಂದು ಕರೆಸಿಕೊಂಡವರು ಭಾರತವನ್ನು ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಪೌರತ್ವ ಕಾಯ್ದೆಯನ್ನು ಬದಿಗೆ ಹಾಕಬೇಕು- ಬಿಜೆಪಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಮಧ್ವರಾಜ್ ಒತ್ತಾಯಿಸಿದರು.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

7 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

22 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

37 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago