ಉಡುಪಿ: ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಪ್ರಧಾನಿ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರ ಸರಕಾರದ ವಿರುದ್ಧ ಕೆಂಡಕಾರಿದ್ದಾರೆ.
ನನ್ನ ಬಳಿ ಎನ್ ಆರ್ ಸಿಯ ಯಾರಾದರೂ ದಾಖಲೆಗಳನ್ನು ಸಾಬೀತುಪಡಿಸಲು ಕೇಳಿದರೆ ನಾನು ಕೊಡಲು ಹೋಗುವುದಿಲ್ಲ ಯಾಕೆಂದರೆ ನಾನು ಭಾರತೀಯ. ಈ ವಿಚಾರದಲ್ಲಿ ಜೈಲಿಗೆ ಹೋಗಲು ಕೂಡ ಸಿದ್ದನಿದ್ದೇನೆ. ಈ ದೇಶದಲ್ಲಿ ಸುಪ್ರೀಂ ಕೋರ್ಟ್ ಜೀವಂತವಿದ್ದರೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮುದ್ರಕ್ಕೆ ಎಸೆಯಲಿ. ಸುಪ್ರೀ ಕೋರ್ಟ್ ಜನರಿಗೆ ರಕ್ಷಣೆ ಕೊಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಜನವಿರೋಧಿ ದೇಶ ವಿರೋಧಿ ಸಂವಿಧಾನ ವಿರೋಧಿ ಎನ್ ಆರ್ ಸಿ, ಸಿಎಎ ಕಾಯಿದೆ ತರುವ ಮೂಲಕ ಬಿಜೆಪಿ ಭಾರತಕ್ಕೆ ಬೆಂಕಿ ಇಡುತ್ತಿದೆ.
ಭಾರತದಲ್ಲಿ 130 ಕೋಟಿ ಜನರೂ ಸಮಾನರು. ದೇಶದ ಧರ್ಮೀಯರಲ್ಲಿ ಬೇಧ ಭಾವ ಮಾಡಕೂಡದು. ಸಂವಿಧಾನದಲ್ಲಿ ಧಾರ್ಮಿಕ ವಿಭಜನೆಗೆ ಅವಕಾಶವಿಲ್ಲ ಎಂದು ಹೇಳಿದರು.
ಈ ಎರಡು ಕಾಯ್ದೆಯ ಮೂಲಕಬಿಜೆಪಿ ಈ ದೇಶಕ್ಕೆ ಬೆಂಕಿ ಕೊಡುತ್ತಿದೆ. ಜನ ಬೀದಿಗಿಳಿದು ಘರ್ಷಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರಕಾರ ಆರ್ಥಿಕವಾಗಿ ಭಾರತವನ್ನು ನಿರ್ಣಾಮ ಮಾಡಿಯಾಗಿದೆ, ಇದೀಗ ಬಾಂಗ್ಲಾದೇಶದ ಅರ್ಧದಷ್ಟು ಜಿಡಿಪಿಗೆ ಭಾರತ ಇಳಿದಿದೆ. ಇಂದಿರಾಗಾಂಧಿ ಕಟ್ಟಿದ ಬಾಂಗ್ಲಾದೇಶ ಸುಭದ್ರ ಆಗಿದೆ. ಭಾರತದ ಆರ್ಥಿಕ ತಳಹದಿಯೇ ಕುಸಿದಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ, ಮಹಾನ್ ನಾಯಕರು ಎಂದು ಕರೆಸಿಕೊಂಡವರು ಭಾರತವನ್ನು ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಪೌರತ್ವ ಕಾಯ್ದೆಯನ್ನು ಬದಿಗೆ ಹಾಕಬೇಕು- ಬಿಜೆಪಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಮಧ್ವರಾಜ್ ಒತ್ತಾಯಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…