ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ನಿಮ್ಮ (ಬಿಜೆಪಿ) ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ. ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್ಕೆ ಆಡ್ವಾಣಿಗೆ ಭಾರತ ರತ್ನ ನೀಡಿ ಗೌರವಿಸಿತು. ಆದರೆ, ಅವರು ಪಾಕಿಸ್ತಾನದ ಲಾಹೋರ್ನಲ್ಲಿರುವ ಜಿಲ್ಲಾ ಸಮಾಧಿಗೆ ಭೇಟಿ ನೀಡಿ, ಅವರಷ್ಟು ಜಾತ್ಯಾತೀತ ನಾಯಕ ಯಾರೂ ಇಲ್ಲ ಎಂದಿದ್ದರು. ಆಗ ಬಿಜೆಪಿಗರಿಗೆ ಪಾಕಿಸ್ತಾನ ಶತ್ರು ದೇಶವಾಗಿರಲಿಲ್ಲವೇ?…ಕಾಂಗ್ರೆಸ್ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ ನಂತರವೂ ಪಾಕಿಸ್ತಾನವನ್ನು “ಶತ್ರು ರಾಷ್ಟ್ರ” ಎಂದು ಕಾಂಗ್ರೆಸ್ ಕರೆಯೋದಿಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…