ಮಂಗಳೂರು, : ದೇಶದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿದ್ದು, ಕೇಂದ್ರ ಸರಕಾರ ಮಲಗಿದೆ ಎಂದು ವಿಧಾನ ಪರಿಷತ್ನ ಸದಸ್ಯರಾದ ಐವನ್ ಡಿಸೋಜ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ನಡುವೆ ಆರ್ಬಿಐನಿಂದ ಹಣವನ್ನು ಹಿಂಪಡೆದಿರುವ ಕೇಂದ್ರ ಸರಕಾರ ದೇಶವನ್ನು ಗಂಡಾಂತರಕ್ಕೆ ತಳ್ಳಿದೆ ಎಂದರು.
ದೇಶವು ತೀವ್ರವಾದ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳ ವಿಲೀನದ ಮೂಲಕ ಕೇಂದ್ರ ಸರಕಾರ ಕಾರ್ಪೊರೇಟ್ ಕಂಪನಿಗಳಿಗೆ ಸಹಕರಿಸುತ್ತಿದೆ. ಈ ಮೂಲಕ ಬ್ಯಾಂಕ್ಗಳ ಖಾಸಗೀಕರಣಕ್ಕೆ ಕುತಂತ್ರ ನಡೆಸಿದೆ. ಬ್ಯಾಂಕ್ಗಳ ವಿಲೀನೀಕರಣ ದೇಶದ ಜನತೆಗೆ ಮಾಡುವ ದ್ರೋಹ ಎಂದು ಅವರು ಆಪಾದಿಸಿದರು.
ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಹೋರಾಟವನ್ನೂ ನಡೆಸಲಿದೆ. ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗ ಶೀಘ್ರವೇ ಕೇಂದ್ರದ ಹಣಕಾಸು ಸಚಿವರನ್ನು ಈ ವಿಷಯದಲ್ಲಿ ಭೇಟಿ ಮಾಡಲಿದೆ ಎಂದು ಅವರು ಹೇಳಿದರು.
ಬಿಜೆಪಿಗೆ ಪ್ರಚಾರ ಮಾಡಿಯೇ ಗೊತ್ತು ಹೊರತು ವಿಚಾರ ಮಾಡುವುದು ತಿಳಿದಿಲ್ಲ. ಬಿಜೆಪಿಗೆ ಸಲಹೆ ಬರುವುದು ನಾಗಪುರದಿಂದ ಎಂಬಂತೆ ಕಾಣುತ್ತಿದೆ. ಅಲ್ಲಿರುವವರು ಪ್ರಚಾರಕರೇ ಹೊರತು ವಿಚಾರಕರಲ್ಲ. ಪ್ರಧಾನಿಯವರಿಗೆ ಇದಕ್ಕೆಲ್ಲಾ ಸಮಯವೇ ಇಲ್ಲ. ಅವರು ವಿದೇಶದ ಪ್ರವಾಸದಲ್ಲಿ ನಿರತರಾಗಿದ್ದಾರೆ ಎಂದು ಐವನ್ ಡಿಸೋಜ ಟೀಕಿಸಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…