ಹೊಸದಿಲ್ಲಿ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾದರೆ ಪಾಕಿಸ್ತಾನ ಭಾರತ ಸಂಬಂಧ ವೃದ್ಧಿಯಾಗಲಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜಿವಾಲ ಪಾಕಿಸ್ತಾನ ಬಿಜೆಪಿಯೊಂದಿಗೆ ಅಧಿಕೃತ ಸಂಬಂಧ ಹೊಂದಿದೆ, ಬಿಜೆಪಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದ ಹಾಗೆ ಎಂದು ಹೇಳಿದ್ದಾರೆ.
‘ಮೋದಿ ಅವರ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಒದಗುತ್ತದೆ ಮತ್ತು ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗುತ್ತದೆ’ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ‘ಪಾಕಿಸ್ಥಾನ ಮೋದಿ ಜತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಮಾಧ್ಯಮ ವರದಿ ಸಾಕ್ಷಿಯಾಗಿದೆ’ ಎಂದು ಹೇಳಿದರು.
ಟ್ವೀಟ್ ಮಾಡಿರುವ ಸುರ್ಜೇವಾಲಾ ಅವರು “ಪಾಕಿಸ್ಥಾನ ಮೋದಿ ಜತೆಗೆ ಅಧಿಕೃತ ಹೊಂದಾಣಿಕೆ ಮಾಡಿಕೊಂಡಿದೆ; ಮೋದಿಗೆ ಓಟ್ ಹಾಕಿದರೆ ಪಾಕಿಸ್ಥಾನಕ್ಕೆ ಓಟ್ ಹಾಕಿದ ಹಾಗೆ’ ಎಂದು ಟೀಕಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…