ಹೊಸದಿಲ್ಲಿ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾದರೆ ಪಾಕಿಸ್ತಾನ ಭಾರತ ಸಂಬಂಧ ವೃದ್ಧಿಯಾಗಲಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜಿವಾಲ ಪಾಕಿಸ್ತಾನ ಬಿಜೆಪಿಯೊಂದಿಗೆ ಅಧಿಕೃತ ಸಂಬಂಧ ಹೊಂದಿದೆ, ಬಿಜೆಪಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದ ಹಾಗೆ ಎಂದು ಹೇಳಿದ್ದಾರೆ.
‘ಮೋದಿ ಅವರ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಒದಗುತ್ತದೆ ಮತ್ತು ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗುತ್ತದೆ’ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ‘ಪಾಕಿಸ್ಥಾನ ಮೋದಿ ಜತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಮಾಧ್ಯಮ ವರದಿ ಸಾಕ್ಷಿಯಾಗಿದೆ’ ಎಂದು ಹೇಳಿದರು.
ಟ್ವೀಟ್ ಮಾಡಿರುವ ಸುರ್ಜೇವಾಲಾ ಅವರು “ಪಾಕಿಸ್ಥಾನ ಮೋದಿ ಜತೆಗೆ ಅಧಿಕೃತ ಹೊಂದಾಣಿಕೆ ಮಾಡಿಕೊಂಡಿದೆ; ಮೋದಿಗೆ ಓಟ್ ಹಾಕಿದರೆ ಪಾಕಿಸ್ಥಾನಕ್ಕೆ ಓಟ್ ಹಾಕಿದ ಹಾಗೆ’ ಎಂದು ಟೀಕಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…