Featured

ಬಿಜೆಪಿಗೆ ಮತ ಹಾಕುವವರು ಮುಸ್ಲಿಮರೇ ಅಲ್ಲ: ಸಚಿವ ಜಮೀರ್ ಅಹ್ಮದ್‌ – Vishwanews24

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೇ ಮತ ಹಾಕುವಂತೆ ಕರೆ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌, ‘ಬಿಜೆಪಿಗೆ ಮತ ಹಾಕುವ ಮುಸ್ಲಿಮರು ಮುಸ್ಲಿಮರೇ ಅಲ್ಲ’ ಎಂದು ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಆಲ್‌ ಇಂಡಿಯಾ ಜಮಿಯತ್‌ವುಲ್‌ ಮನ್ಸೂರ್‌ ಭಾನುವಾರ ಹಮ್ಮಿಕೊಂಡಿದ್ದ ನದಾಫ್, ಪಿಂಜಾರ ಹಾಗೂ ಮನ್ಸೂರಿ ಸಮಾಜಗಳ ರಾಷ್ಟ್ರೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಒಂದು ವೇಳೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾದರೆ, ಅಲ್ಪಸಂಖ್ಯಾತರು ಭಯದಲ್ಲಿ ಬದುಕಬೇಕಾಗುತ್ತದೆ. ಆದ್ದರಿಂದ ಜಾತ್ಯತೀತ ತತ್ವದಲ್ಲಿ ನಂಬಿಕೆಯಿರುವ ಪಕ್ಷಕ್ಕೇ ಮತ ಹಾಕಬೇಕು. ಸಮುದಾಯ ಒಗ್ಗಟ್ಟಾಗಿ ಮತ್ತು ಕಡ್ಡಾಯವಾಗಿ ಮತ ಚಲಾಯಿಸಿದರೆ, ರಾಜ್ಯದಲ್ಲಿ ಕಾಂಗ್ರೆಸ್‌ 20ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 85 ಲಕ್ಷ ಮುಸ್ಲಿಮರ ಪೈಕಿ 30 ಲಕ್ಷ ನದಾಫ್, ಪಿಂಜಾರರು ಇದ್ದಾರೆ. ಹೀಗಾಗಿ, ಆ ಸಮುದಾಯದ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡ ಲಾಗುವುದು. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ದೇಶದಲ್ಲಿ ಅಸಮಾನತೆ, ಆರ್ಥಿಕ ಸಂಕಷ್ಟ ಸೇರಿದಂತೆ ದೊಡ್ಡ ದೊಡ್ಡ ಸಮಸ್ಯೆಗಳನ್ನು ಹುಟ್ಟು ಹಾಕಿದ್ದಾರೆ. ದೇಶದಲ್ಲಿ ಜಾತ್ಯಾತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕವಂತಹ ವಾತಾವರಣ ನಿರ್ಮಾಣವಾಗಿದೆ. ಬದಲಾವಣೆಗಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿ ಮಾಡಲಾಯಿತು. ಮುಂದೆ ಹೀಗಾಗಬಾರದೆಂದರೆ ಮುಸ್ಲಿಂರು ಜಾತ್ಯಾತೀತ ಪಕ್ಷಕ್ಕೆ ಮತ ಹಾಕಬೇಕು ಎಂದು ಕರೆ ನೀಡಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಚಿವ ಆರ್‌.ಎ. ಉಸ್ಮಾನಿ ಮನ್ಸೂರಿ, ಪಶ್ಚಿಮ ಬಂಗಾಳ ಶಾಸಕ ಮೊಹಿದ್ದೀನ್‌ ಶಮ್ಸ್, ರಾಷ್ಟ್ರೀಯ ಅಧ್ಯಕ್ಷ ಜಾವೀದ್‌ ಇಕ್ಬಾಲ್‌ ಮನ್ಸೂರಿ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago