ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ , ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ : ರೇಣುಕಾಚಾರ್ಯ -Vishwanews24
ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ , ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ : ರೇಣುಕಾಚಾರ್ಯ -Vishwanews24
ಬೆಂಗಳೂರು: ‘ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ. ಆದರೆ, ಜೆಡಿಎಸ್ಗೆ ಯಾರು ಅನಿವಾರ್ಯ ಎಂಬುದು ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ’ ಎಂದರು.
ವಿಧಾನ ಪರಿಷತ್ನಲ್ಲಿ ಮಂಗಳವಾರ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಭಾಪತಿಯವರು ಪೀಠಕ್ಕೆ ಬರುವುದಿಲ್ಲ ಎಂದು ಉಪಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿ ಸದಸ್ಯರು ರಕ್ಷಣೆಗೆ ಹೋದರು. ಇಲ್ಲದಿದ್ದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು’ ಎಂದರು.
