Featured

ಬಿಜೆಪಿಗೆ ಶಾಕ್, ಎನ್‍ಡಿಎ ಮೈತ್ರಿಕೂಟ ಮತ್ತೊಂದು ಪಕ್ಷ ಔಟ್

ನವದೆಹಲಿ, : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಎನ್‌ಡಿಎ ಮೈತ್ರಿಕೂಟದಿಂದ ಪಕ್ಷಗಳು ಹೊರ ನಡೆಯುತ್ತಿವೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ಹೊರ ನಡೆಯುತ್ತಿದ್ದು, ಈಗ ಅಸ್ಸಾಂ ನಲ್ಲಿ ಆಡಳಿತಾರೂಢ ಪಕ್ಷವಾಗಿರುವ ಬಿಜೆಪಿ ಮೈತ್ರಿಯಿಂದ ಅಸೋಮ್ ಗಣ ಪರಿಷತ್ (AGP) ಹೊರನಡೆದಿದೆ.

ಬಿಜೆಪಿ ನೇತೃತ್ವದ NDAಗೆ ಮತ್ತೊಂದು ಶಾಕ್

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ(ಸಿಟಿಜನ್ಶಿಪ್ ತಿದ್ದುಪಡಿ ಮಸೂದೆ) ಯನ್ನು ವಿರೋಧಿಸಿ ಎಜಿಪಿ ಬಿಜೆಪಿ ಮೈತ್ರಿ ಕಡಿದುಕೊಂಡಿದ್ದು, ಈ ಬಗ್ಗೆ ಎಜಿಪಿ ಅಧ್ಯಕ್ಷ ಹಾಗೂ ಸಚಿವರೂ ಆಗಿರುವ ಅತುಲ್ ಬೋರಾ ಖಚಿತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ಥಾನದ ಮುಸ್ಲಿಮೇತರ ಜನರಿಗೆ ಭಾರತದ ಪೌರತ್ವ ನೀಡಲಾಗುವ ಅಂಶವನ್ನು ಪ್ರಸ್ತಾಪಿಸಲಾಗಿದ್ದು, ಇದನ್ನು ಎಜಿಪಿ ವಿರೋಧಿಸಿದೆ.

ಈ ಬಗ್ಗೆ ಎಜಿಪಿ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ತಾನು ವಿರೋಧಿಸುತ್ತಿರುವ ಅಂಶಗಳನ್ನು ಜಾರಿ ಮಾಡದಂತೆ ಮನವಿ ಮಾಡಿತ್ತು.

ಆದ್ರೆ, ಸರ್ಕಾರ ಮಸೂದೆಯನ್ನು ಜಾರಿಗೊಳಿಸುವುದಾಗಿ ಹೇಳಿದೆ. ಇದ್ರಿಂದ ಅಸ್ಸಾಂನಲ್ಲಿ ಬಿಜೆಪಿ ಜೊತೆ ಮೈತ್ರಿ ತೊರೆಯುತ್ತಿದ್ದೇವೆ ಎಂದು ಅತುಲ್ ಬೋರಾ ಸ್ಪಷ್ಟಪಡಿಸಿದ್ದಾರೆ.

ಇನ್ನು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಗತಿ ಏನಾಗಲಿದೆ ಎನ್ನುವುದನ್ನು ನೋಡುವುದಾರೆ, 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 61 ಸದಸ್ಯರನ್ನ ಹೊಂದಿದೆ.

ಮಿತ್ರಪಕ್ಷ ಬೋಡೋಲ್ಯಾಂಡ್​ ಪೀಪಲ್ಸ್​ ಫ್ರಂಟ್​ 12 ಸ್ಥಾನಗಳನ್ನು ಹೊಂದಿದ್ದು, ಎಜೆಪಿ 14 ಸ್ಥಾನಗಳನ್ನ ಹೊಂದಿದೆ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಆದ್ರೆ ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೊಂಚ ಹಿನ್ನಡೆಯಾಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago