Featured

ಬಿಜೆಪಿಗೆ ಶಾಕ್, ಎನ್‍ಡಿಎ ಮೈತ್ರಿಕೂಟ ಮತ್ತೊಂದು ಪಕ್ಷ ಔಟ್

ನವದೆಹಲಿ, : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಎನ್‌ಡಿಎ ಮೈತ್ರಿಕೂಟದಿಂದ ಪಕ್ಷಗಳು ಹೊರ ನಡೆಯುತ್ತಿವೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ಹೊರ ನಡೆಯುತ್ತಿದ್ದು, ಈಗ ಅಸ್ಸಾಂ ನಲ್ಲಿ ಆಡಳಿತಾರೂಢ ಪಕ್ಷವಾಗಿರುವ ಬಿಜೆಪಿ ಮೈತ್ರಿಯಿಂದ ಅಸೋಮ್ ಗಣ ಪರಿಷತ್ (AGP) ಹೊರನಡೆದಿದೆ.

ಬಿಜೆಪಿ ನೇತೃತ್ವದ NDAಗೆ ಮತ್ತೊಂದು ಶಾಕ್

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ(ಸಿಟಿಜನ್ಶಿಪ್ ತಿದ್ದುಪಡಿ ಮಸೂದೆ) ಯನ್ನು ವಿರೋಧಿಸಿ ಎಜಿಪಿ ಬಿಜೆಪಿ ಮೈತ್ರಿ ಕಡಿದುಕೊಂಡಿದ್ದು, ಈ ಬಗ್ಗೆ ಎಜಿಪಿ ಅಧ್ಯಕ್ಷ ಹಾಗೂ ಸಚಿವರೂ ಆಗಿರುವ ಅತುಲ್ ಬೋರಾ ಖಚಿತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ಥಾನದ ಮುಸ್ಲಿಮೇತರ ಜನರಿಗೆ ಭಾರತದ ಪೌರತ್ವ ನೀಡಲಾಗುವ ಅಂಶವನ್ನು ಪ್ರಸ್ತಾಪಿಸಲಾಗಿದ್ದು, ಇದನ್ನು ಎಜಿಪಿ ವಿರೋಧಿಸಿದೆ.

ಈ ಬಗ್ಗೆ ಎಜಿಪಿ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ತಾನು ವಿರೋಧಿಸುತ್ತಿರುವ ಅಂಶಗಳನ್ನು ಜಾರಿ ಮಾಡದಂತೆ ಮನವಿ ಮಾಡಿತ್ತು.

ಆದ್ರೆ, ಸರ್ಕಾರ ಮಸೂದೆಯನ್ನು ಜಾರಿಗೊಳಿಸುವುದಾಗಿ ಹೇಳಿದೆ. ಇದ್ರಿಂದ ಅಸ್ಸಾಂನಲ್ಲಿ ಬಿಜೆಪಿ ಜೊತೆ ಮೈತ್ರಿ ತೊರೆಯುತ್ತಿದ್ದೇವೆ ಎಂದು ಅತುಲ್ ಬೋರಾ ಸ್ಪಷ್ಟಪಡಿಸಿದ್ದಾರೆ.

ಇನ್ನು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಗತಿ ಏನಾಗಲಿದೆ ಎನ್ನುವುದನ್ನು ನೋಡುವುದಾರೆ, 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 61 ಸದಸ್ಯರನ್ನ ಹೊಂದಿದೆ.

ಮಿತ್ರಪಕ್ಷ ಬೋಡೋಲ್ಯಾಂಡ್​ ಪೀಪಲ್ಸ್​ ಫ್ರಂಟ್​ 12 ಸ್ಥಾನಗಳನ್ನು ಹೊಂದಿದ್ದು, ಎಜೆಪಿ 14 ಸ್ಥಾನಗಳನ್ನ ಹೊಂದಿದೆ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಆದ್ರೆ ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೊಂಚ ಹಿನ್ನಡೆಯಾಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ.

Vishwa News 24

Recent Posts

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

46 minutes ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

1 hour ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

1 hour ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

2 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

2 hours ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

2 hours ago