Featured

ಬಿಜೆಪಿ ಸೇರಿದ ಸೂಪರ್ ಸ್ಟಾರ್..! ದೇಶದ ಹಿತಾದೃಷ್ಟಿಯಿಂದ ನಾನು ಮೋದಿಯವರನ್ನು ಬೆಂಬಲಿಸುತ್ತೇನೆ ಎಂದ ತಲೈವ…

ತಮಿಳುನಾಡಿನಲ್ಲೂ ಕಮಲ ಅರಳಿಸಲಿದ್ದಾರೆ ರಜನಿಕಾಂತ್..

ತಮಿಳುನಾಡು :೨೦೧೯ರಲ್ಲಿ ಮತ್ತೆ ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರ ಹಿಡಿಯೋದು ಅನುಮಾನವೇ ಇಲ್ಲ. ಈಗಾಗಲೇ ಹಲವಾರು ಸಮೀಕ್ಷೆಗಳು ಸಹಿತ ಮಾಧ್ಯಮಗಳು ನಡೆಸಿದ ಸರ್ವೇಗಳಲ್ಲಿಯೂ ಮೋದಿಯೇ ಟಾಪ್ ಎಂದಿದೆ. ಆದರೆ ಈಗ ಬಿಜೆಪಿ ಮುಂದಿರೋದು ಕೇವಲ ಗೆಲ್ಲಬೇಕೆನ್ನುವ ಉದ್ದೇಶ ಮಾತ್ರವಲ್ಲ. ಬದಲಾಗಿ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯ ತಂದುಕೊಳ್ಳಬೇಕು ಎನ್ನುವ ಉದ್ದೇಶ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲದ ತಮಿಳುನಾಡಿನಲ್ಲಿ ಸಹಿತ ದೇಶದಾದ್ಯಂತ ಕಮಲ ಅರಳಿಸಲು ಯೋಜನೆ ರೂಪಿಸಿಕೊಂಡಿದೆ..

ರಜನಿಕಾಂತ್ ಗೆ ಭಾರತೀಯ ಜನತಾ ಪಕ್ಷದ ಮೇಲಿನ ಒಲವು  ಇದೀಗ ಮತ್ತೆ ಭಾರತೀಯ ಜನತಾ ಪಕ್ಷ ಸೇರುವ ಇಚ್ಛೆಯನ್ನು ರಜನಿ ಚರ್ಚಿಸುತ್ತಿದ್ದಾರೆ. ಕಳೆದ ೭ ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ರಜನಿಕಾಂತ್ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹಿತ ಅನೇಕ ಪ್ರಮುಖ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಏಳು ದಿನದಿಂದ ಬರೋಬ್ಬರಿ ಐದು ಸಭೆಗಳನ್ನು ರಜನಿಕಾಂತ್ ಬಿಜೆಪಿ ನಾಯಕರೊಂದಿಗೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಬಾರಿ ರಜನಿಕಾಂತ್ ಬಿಜೆಪಿ ಸೇರೋದು ಪಕ್ಕಾ ಎನ್ನಲಾಗಿದೆ.

ಜಾಹೀರಾತು : ವಿಶ್ವ ಬಂಟರ ಸಮ್ಮಿಲನ 2018

ತನ್ನದೇ ಪಕ್ಷದ ಸೈನ್ಯವನ್ನು ಕಮಲ ಪಾಳಯ ಸಂಘಟಿಸುತ್ತಿದೆ. ತಮಿಳುನಾಡಿನ ಪುದುಚೇರಿಯಲ್ಲಿ ಈಗಾಗಲೇ 10000 ಕಾರ್ಯಕರ್ತರನ್ನು ಸಂಘಟಿಸಿ ಬೂತ್ ಸಬಲೀಕರಣದತ್ತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಿದೆ. ಡಿಎಂಕೆ ಪಕ್ಷದ ನಾಯಕ, ಕರುಣಾ ನಿಧಿಯವರ ಮಗ ಸ್ಟಾಲಿನ್ ಇದ್ದರೂ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ಅವರನ್ನು ಎದುರಿಸೋದು ಕಷ್ಟ. ರಜನಿಕಾಂತ್‍ಗೂ ಒಬ್ಬಂಟಿಯಾಗಿ ಪಕ್ಷವನ್ನು ಗೆಲ್ಲಿಸೋದು ಸುಲಭದ ಮಾತಲ್ಲ. ಅತ್ತ ಕಮಲ್ ಹಸನ್ ಪಕ್ಷ ಸಂಘಟಿಸುತ್ತಿದ್ದರೂ ಅವರ ಮೇಲೆ ಜನರಿಗೆ ಉತ್ತಮ ಅಭಿಪ್ರಾಯವಿಲ್ಲ. ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಕಮಲ್ ಹಸನ್ ಜನರಿಂದ ದೂರವಾಗಿದ್ದಾರೆ. ಆದರೆ ರಜನಿಕಾಂತ್ ಮಾತ್ರ ನರೇಂದ್ರ ಮೋದಿ ರೀತಿಯ ನಡವಳಿಕೆಯಿಂದ ಹೆಸರಾಗಿದ್ದಾರೆ. ಹೀಗಾಗಿ ಇಂತಹಾ ನಾಯಕ ಬೇಕು ಎಂದು ಜನರೂ ಅಪೇಕ್ಷಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಕ್ರಾಂತಿಗೂ ಒಳಗಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago