ತಮಿಳುನಾಡಿನಲ್ಲೂ ಕಮಲ ಅರಳಿಸಲಿದ್ದಾರೆ ರಜನಿಕಾಂತ್..
ತಮಿಳುನಾಡು :೨೦೧೯ರಲ್ಲಿ ಮತ್ತೆ ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರ ಹಿಡಿಯೋದು ಅನುಮಾನವೇ ಇಲ್ಲ. ಈಗಾಗಲೇ ಹಲವಾರು ಸಮೀಕ್ಷೆಗಳು ಸಹಿತ ಮಾಧ್ಯಮಗಳು ನಡೆಸಿದ ಸರ್ವೇಗಳಲ್ಲಿಯೂ ಮೋದಿಯೇ ಟಾಪ್ ಎಂದಿದೆ. ಆದರೆ ಈಗ ಬಿಜೆಪಿ ಮುಂದಿರೋದು ಕೇವಲ ಗೆಲ್ಲಬೇಕೆನ್ನುವ ಉದ್ದೇಶ ಮಾತ್ರವಲ್ಲ. ಬದಲಾಗಿ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯ ತಂದುಕೊಳ್ಳಬೇಕು ಎನ್ನುವ ಉದ್ದೇಶ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲದ ತಮಿಳುನಾಡಿನಲ್ಲಿ ಸಹಿತ ದೇಶದಾದ್ಯಂತ ಕಮಲ ಅರಳಿಸಲು ಯೋಜನೆ ರೂಪಿಸಿಕೊಂಡಿದೆ..
ರಜನಿಕಾಂತ್ ಗೆ ಭಾರತೀಯ ಜನತಾ ಪಕ್ಷದ ಮೇಲಿನ ಒಲವು ಇದೀಗ ಮತ್ತೆ ಭಾರತೀಯ ಜನತಾ ಪಕ್ಷ ಸೇರುವ ಇಚ್ಛೆಯನ್ನು ರಜನಿ ಚರ್ಚಿಸುತ್ತಿದ್ದಾರೆ. ಕಳೆದ ೭ ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ರಜನಿಕಾಂತ್ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹಿತ ಅನೇಕ ಪ್ರಮುಖ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಏಳು ದಿನದಿಂದ ಬರೋಬ್ಬರಿ ಐದು ಸಭೆಗಳನ್ನು ರಜನಿಕಾಂತ್ ಬಿಜೆಪಿ ನಾಯಕರೊಂದಿಗೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಬಾರಿ ರಜನಿಕಾಂತ್ ಬಿಜೆಪಿ ಸೇರೋದು ಪಕ್ಕಾ ಎನ್ನಲಾಗಿದೆ.
ತನ್ನದೇ ಪಕ್ಷದ ಸೈನ್ಯವನ್ನು ಕಮಲ ಪಾಳಯ ಸಂಘಟಿಸುತ್ತಿದೆ. ತಮಿಳುನಾಡಿನ ಪುದುಚೇರಿಯಲ್ಲಿ ಈಗಾಗಲೇ 10000 ಕಾರ್ಯಕರ್ತರನ್ನು ಸಂಘಟಿಸಿ ಬೂತ್ ಸಬಲೀಕರಣದತ್ತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಿದೆ. ಡಿಎಂಕೆ ಪಕ್ಷದ ನಾಯಕ, ಕರುಣಾ ನಿಧಿಯವರ ಮಗ ಸ್ಟಾಲಿನ್ ಇದ್ದರೂ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ಅವರನ್ನು ಎದುರಿಸೋದು ಕಷ್ಟ. ರಜನಿಕಾಂತ್ಗೂ ಒಬ್ಬಂಟಿಯಾಗಿ ಪಕ್ಷವನ್ನು ಗೆಲ್ಲಿಸೋದು ಸುಲಭದ ಮಾತಲ್ಲ. ಅತ್ತ ಕಮಲ್ ಹಸನ್ ಪಕ್ಷ ಸಂಘಟಿಸುತ್ತಿದ್ದರೂ ಅವರ ಮೇಲೆ ಜನರಿಗೆ ಉತ್ತಮ ಅಭಿಪ್ರಾಯವಿಲ್ಲ. ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಕಮಲ್ ಹಸನ್ ಜನರಿಂದ ದೂರವಾಗಿದ್ದಾರೆ. ಆದರೆ ರಜನಿಕಾಂತ್ ಮಾತ್ರ ನರೇಂದ್ರ ಮೋದಿ ರೀತಿಯ ನಡವಳಿಕೆಯಿಂದ ಹೆಸರಾಗಿದ್ದಾರೆ. ಹೀಗಾಗಿ ಇಂತಹಾ ನಾಯಕ ಬೇಕು ಎಂದು ಜನರೂ ಅಪೇಕ್ಷಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಕ್ರಾಂತಿಗೂ ಒಳಗಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…