Featured

ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್‌.ಮಹೇಶ್‌ ; ಮಹೇಶ್‌ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ: ಸಿಎಂ ಬೊಮ್ಮಾಯಿ -Vishwanews24

ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್‌.ಮಹೇಶ್‌ ..

ಮಹೇಶ್‌ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಸಿಕ್ಕಿದೆ: ಸಿಎಂ ಬೊಮ್ಮಾಯಿ -Vishwanews24

ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರು: ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಗುರುವಾರ ಬಿಜೆಪಿಯನ್ನು ಸೇರ್ಪಡೆಗೊಂಡರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದಿಂದ ಗೆದ್ದಿದ್ದ ಮಹೇಶ್‌ ಅವರು ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದರು. ಸರ್ಕಾರದ ಪತನದ ಬಳಿಮ ಅವರು ಬಿಜೆಪಿಯತ್ತ ವಾಲಿದರು. ಈ ಕಾರಣಕ್ಕೆ ಬಿಎಸ್‌ಪಿಯಿಂದ ಅವರನ್ನು ಉಚ್ಚಾಟಿಸಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮಹೇಶ್‌ ಚಳವಳಿಯಿಂದ ಬಂದವರು. ಅವರ ಸಂಘಟನಾ ಶಕ್ತಿ ದೊಡ್ಡ ಪ್ರಮಾಣದಲ್ಲಿದೆ. ಹೀಗಾಗಿ ಅವರು ಶಾಸಕರಾಗುವ ಮೊದಲೇ ದಲಿತ ಸಮುದಾಯದ ಹೃದಯವನ್ನು ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಒಟ್ಟಾಗಿ ಇವರನ್ನು ಶಾಸಕರನ್ನಾಗಿ ಆರಿಸಿದ್ದಾರೆ. ಇತರ ಜನಾಂಗದವರೂ ಪ್ರೀತಿ ಹೊಂದಿದ್ದಾರೆ ಎಂದರು.

ಮಹೇಶ್‌ ಚಿಂತನೆ ಮತ್ತು ಬಿಜೆಪಿ ಚಿಂತನೆ ವಿಭಿನ್ನ ಅಲ್ಲ. ಸರ್ವೇಜನ ಸುಖಿನೋ ಭವಂತು ಎಂಬ ನಮ್ಮ ಚಿಂತನೆ ಅವರಿಗೆ ಮನವರಿಕೆ ಆದ ಮೇಲೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗುವಾಗ ಸ್ವಯಂ ಪ್ರೇರಣೆಯಿಂದ ಬಂದು, ಬೆಂಬಲ ನೀಡಿದರು ಎಂದರು.

ರಾಜ್ಯದಲ್ಲಿ ಒಳ್ಳೆ ಸರ್ಕಾರ ಬರುತ್ತದೆ, ಯಡಿಯೂರಪ್ಪ ನೇತೃತ್ವದಲ್ಲಿ ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಕೊಡ್ತಾರೆ ಎಂಬ ವಿಶ್ವಾಸವಿಟ್ಟು ಬಂದಿದ್ದಾರೆ. ಅವರ ಎರಡು ವರ್ಷದ ಬಿಜೆಪಿ ಜತೆಗಿನ ಸಂಬಂಧದ ಕಾರಣ ಪಕ್ಷ ಸೇರಲು ನಿರ್ಣಯ ಮಾಡಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಮಹೇಶ್‌ ಸೇವೆ ರಾಜ್ಯಕ್ಕೆ ಆಗಲಿ. ಅಷ್ಟು ಶಕ್ತಿ ಅವರಿಗಿದೆ. ವಿಜಯೇಂದ್ರ ಅವರು ವಾರಕ್ಕೆ ಒಮ್ಮೆ ಆ ಭಾಗದಲ್ಲಿ ಸುತ್ತಾಡಿ ಪಕ್ಷದ ಸಂಘಟನೆಯನ್ನು ಗಟ್ಟಿ ಮಾಡಿದ್ದಾರೆ. ವಿಜಯೇಂದ್ರ ಶ್ರಮಕ್ಕೆ ಮಹೇಶ್‌ ಶಕ್ತಿ ಸೇರಿದರೆ, ಮುಂದಿನ ದಿನಗಳಲ್ಲಿ ಆ ಭಾಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಬೇರಿ ಭಾರಿಸುತ್ತದೆ. ಯಡಿಯೂರಪ್ಪ ಕಾರಣದಿಂದ ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆಯ ನೆಲೆಗಟ್ಟು ಸ್ಥಾಪನೆ ಆಗಿದೆ. ಇನ್ನೂ ಹಲವು ಸಮುದಾಯದ ನಾಯಕರು ಬಿಜೆಪಿ ಸೇರುತ್ತಾರೆ ಎಂದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

6 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

6 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

7 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

9 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

10 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 hours ago