ಮೈಸೂರು : ರಾಜ್ಯ ವಿಧಾನಸಭೆ ಚುಣಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಎದುರಾಗಿದ್ದು, ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ. ಬಿಜೆಪಿಯಂತ ಮೋಸಗಾರರು ಯಾರೂ ಇಲ್ಲ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ಹೆಚ್. ವಿಶ್ವನಾಥ್, ಯಡಿಯೂರಪ್ಪ ಇಬ್ಬರೂ ನನ್ನನ್ನು ರಾಜಕೀಯ ಬಲಿ ಕೊಟ್ಟಿದ್ದಾರೆ. ವರುಣಾ ಕ್ಷೇತ್ರದಲ್ಲಿ ರಾಜಕೀಯವಾಗಿ ವಿಜಯೇಂದ್ರ ಬಲಿ ಕೊಡಲು ಪ್ಲ್ಯಾನ್ ಮಾಡಿದ್ದಾರೆ.ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಿ ವಿಜಯೇಂದ್ರ ಅವರನ್ನು ಸೋಲಿಸಲು ತಂತ್ರ ರೂಪಿಸಲಾಗಿದೆ.ವಿಜಯೇಂದ್ರ ಅವರು ವರುಣಾ ಬದಲು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬಹುದು ಎಂದರು.
ಈ ಬಾರಿ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ.ಪರಿಷತ್ ಸ್ಥಾನ ಕೊಡುತ್ತೇನೆ ಎಂದು ನನ್ನನ್ನು ಬಿಜೆಪಿಗೆ ಕರೆದುಕೊಂಡು ಬಂದರು.ನನ್ನನ್ನು ಬಳಸಿಕೊಡು ಬಿಜೆಪಿಯವರು ಮೋಸ ಮಾಡಿದರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…