ಪಶ್ಚಿಮ ಬಂಗಾಳ: ‘ಬಂಗಾಳದಲ್ಲಿ ಅತ್ತೆ-ಅಳಿಯನ ಸಿಂಡಿಕೇಟ್ ಆಳ್ವಿಕೆಯನ್ನು ಕೊನೆಗೊಳಿಸಿ. ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ. ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಕಾಕದ್ವೀಪ್ನಲ್ಲಿ ಬಿಜೆಪಿಯ ಐದನೇ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ‘ಮಮತಾ ಬ್ಯಾನರ್ಜಿ ಮತ್ತು ಅವರ ತಂಡವನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ತರುವುದು ನಮ್ಮ ಗುರಿ ಅಲ್ಲ. ಇದು ಅವರ ಸಿಂಡಿಕೇಟ್ ರಾಜ್ ಅನ್ನು ಕೊನೆಗೊಳಿಸುವ ಯುದ್ಧ. ಇದು ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಸಿಂಡಿಕೇಟ್ ಸದಸ್ಯರ ನಡುವಣ ಯುದ್ಧ. ನೀವು ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.
‘ಕೇಂದ್ರ ಸರ್ಕಾರದಿಂದ ಕಳುಹಿಸಿದ ಯಾವ ಅನುದಾನವೂ ಬಂಗಾಳದಲ್ಲಿ ಸರಿಯಾಗಿ ಹಂಚಿಕೆಯಾಗುತ್ತಿರಲಿಲ್ಲ. ಪಶ್ಚಿಮ ಬಂಗಾಳ ಸರ್ಕಾರವು ಅತ್ತೆ-ಅಳಿಯನ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿದೆ. ಜನರ ಕಲ್ಯಾಣದಲ್ಲಿ ಆಸಕ್ತಿ ಹೊಂದಿಲ್ಲ’ ಎಂದು ಶಾ ಲೇವಡಿ ಮಾಡಿದ್ದಾರೆ.
‘ನಾವು ಅಧಿಕಾರಕ್ಕೆ ಬಂದರೆ, ಎಲ್ಲಾ ಅನುದಾನವು ಜನರಿಗೆ ತಲುಪುವಂತೆ ಮಾಡುತ್ತೇವೆ. ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಶಾ ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…