Featured

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ..

ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ..

ಪಶ್ಚಿಮ ಬಂಗಾಳ: ‘ಬಂಗಾಳದಲ್ಲಿ ಅತ್ತೆ-ಅಳಿಯನ ಸಿಂಡಿಕೇಟ್ ಆಳ್ವಿಕೆಯನ್ನು ಕೊನೆಗೊಳಿಸಿ. ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ. ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಕಾಕದ್ವೀಪ್‌ನಲ್ಲಿ ಬಿಜೆಪಿಯ ಐದನೇ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ‘ಮಮತಾ ಬ್ಯಾನರ್ಜಿ ಮತ್ತು ಅವರ ತಂಡವನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ತರುವುದು ನಮ್ಮ ಗುರಿ ಅಲ್ಲ. ಇದು ಅವರ ಸಿಂಡಿಕೇಟ್ ರಾಜ್ ಅನ್ನು ಕೊನೆಗೊಳಿಸುವ ಯುದ್ಧ. ಇದು ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಸಿಂಡಿಕೇಟ್ ಸದಸ್ಯರ ನಡುವಣ ಯುದ್ಧ. ನೀವು ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

‘ಕೇಂದ್ರ ಸರ್ಕಾರದಿಂದ ಕಳುಹಿಸಿದ ಯಾವ ಅನುದಾನವೂ ಬಂಗಾಳದಲ್ಲಿ ಸರಿಯಾಗಿ ಹಂಚಿಕೆಯಾಗುತ್ತಿರಲಿಲ್ಲ. ಪಶ್ಚಿಮ ಬಂಗಾಳ ಸರ್ಕಾರವು ಅತ್ತೆ-ಅಳಿಯನ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿದೆ. ಜನರ ಕಲ್ಯಾಣದಲ್ಲಿ ಆಸಕ್ತಿ ಹೊಂದಿಲ್ಲ’ ಎಂದು ಶಾ ಲೇವಡಿ ಮಾಡಿದ್ದಾರೆ.

‘ನಾವು ಅಧಿಕಾರಕ್ಕೆ ಬಂದರೆ, ಎಲ್ಲಾ ಅನುದಾನವು ಜನರಿಗೆ ತಲುಪುವಂತೆ ಮಾಡುತ್ತೇವೆ. ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಶಾ ಹೇಳಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

11 hours ago