Featured

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ..

ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ..

ಪಶ್ಚಿಮ ಬಂಗಾಳ: ‘ಬಂಗಾಳದಲ್ಲಿ ಅತ್ತೆ-ಅಳಿಯನ ಸಿಂಡಿಕೇಟ್ ಆಳ್ವಿಕೆಯನ್ನು ಕೊನೆಗೊಳಿಸಿ. ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ. ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಕಾಕದ್ವೀಪ್‌ನಲ್ಲಿ ಬಿಜೆಪಿಯ ಐದನೇ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ‘ಮಮತಾ ಬ್ಯಾನರ್ಜಿ ಮತ್ತು ಅವರ ತಂಡವನ್ನು ಸೋಲಿಸಿ, ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ತರುವುದು ನಮ್ಮ ಗುರಿ ಅಲ್ಲ. ಇದು ಅವರ ಸಿಂಡಿಕೇಟ್ ರಾಜ್ ಅನ್ನು ಕೊನೆಗೊಳಿಸುವ ಯುದ್ಧ. ಇದು ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಸಿಂಡಿಕೇಟ್ ಸದಸ್ಯರ ನಡುವಣ ಯುದ್ಧ. ನೀವು ಬಿಜೆಪಿಗೆ ಮತ ನೀಡಿ. ಅಕ್ರಮ ವಲಸಿಗರು ಮಾತ್ರವಲ್ಲ, ಒಂದು ಪಕ್ಷಿಯೂ ಗಡಿಯನ್ನು ದಾಟಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

‘ಕೇಂದ್ರ ಸರ್ಕಾರದಿಂದ ಕಳುಹಿಸಿದ ಯಾವ ಅನುದಾನವೂ ಬಂಗಾಳದಲ್ಲಿ ಸರಿಯಾಗಿ ಹಂಚಿಕೆಯಾಗುತ್ತಿರಲಿಲ್ಲ. ಪಶ್ಚಿಮ ಬಂಗಾಳ ಸರ್ಕಾರವು ಅತ್ತೆ-ಅಳಿಯನ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿದೆ. ಜನರ ಕಲ್ಯಾಣದಲ್ಲಿ ಆಸಕ್ತಿ ಹೊಂದಿಲ್ಲ’ ಎಂದು ಶಾ ಲೇವಡಿ ಮಾಡಿದ್ದಾರೆ.

‘ನಾವು ಅಧಿಕಾರಕ್ಕೆ ಬಂದರೆ, ಎಲ್ಲಾ ಅನುದಾನವು ಜನರಿಗೆ ತಲುಪುವಂತೆ ಮಾಡುತ್ತೇವೆ. ಅನುದಾನವನ್ನು ದುರ್ಬಳಕೆ ಮಾಡಿಕೊಂಡವರನ್ನು ಜೈಲಿಗೆ ಅಟ್ಟುತ್ತೇವೆ’ ಎಂದು ಶಾ ಹೇಳಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago